2:14 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು