12:47 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು