10:31 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು