3:59 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು