8:38 PM Thursday9 - April 2026
ಬ್ರೇಕಿಂಗ್ ನ್ಯೂಸ್
Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ…

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು