1:21 AM Saturday7 - June 2025
ಬ್ರೇಕಿಂಗ್ ನ್ಯೂಸ್
ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ…

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು