3:46 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು