2:08 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು