3:06 PM Monday16 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು