6:43 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮಂಗಳೂರು: ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷ ಹಲ್ಲೆ; ಪಾಪಿ ಸೊಸೆಯ ಬಂಧನ

12/03/2024, 17:30

ಮಂಗಳೂರು(reporterkarnataka.com): ನಗರದ ಕುಲಶೇಖರ ಸಮೀಪ ವೃದ್ಧ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷವಾಗಿ ದೈಹಿಕ ಹಲ್ಲೆ ನಡೆಸಿದ ಸೊಸೆಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.


ಅತ್ತಾವರ ಮೆಸ್ಕಾಂ ಕಚೇರಿಯಲ್ಲಿ ಅಧಿಕಾರಿಯಾಗಿರುವ
ಉಮಾಶಂಕರಿ ಎಂಬವರು ಬಂಧಿತ ಮಹಿಳೆ. ನಾದಿನಿ ಪ್ರಿಯಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಉಮಾಶಂಕರಿ ಅವರ ಪತಿ ವಿದೇಶದಲ್ಲಿ ನೌಕರಿಯಲ್ಲಿದ್ದು, ಮನೆಯಲ್ಲಿ ನಡೆಯುವ ಘಟನೆಯನ್ನು ಸಿಸಿ ಕ್ಯಾಮೆರಾ ಮೂಲಕ ಮೊಬೈಲ್ ನಲ್ಲಿ ನೋಡುತ್ತಿದ್ದರು. ತನ್ನ ಪತ್ನಿ ಅಪ್ಪನ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಕಂಡು ನೊಂದ ಪತಿ, ತನ್ನ ತಂಗಿಯಲ್ಲಿ ಉಮಾಶಂಕರಿ ವಿರುದ್ಧ ದೂರು ನೀಡುವಂತೆ ಸೂಚನೆ ನೀಡಿದ್ದರು.
ಮಾವನ ಮೇಲೆ ಸೊಸೆ ನಡೆಸಿದ ಹಲ್ಲೆಯ ಸಿಸಿ ಕ್ಯಾಮೆರಾ ಪೂಟೇಜ್ ನಿನ್ನೆಯೇ ಎಲ್ಲೆಡೆ ವೈರಲ್ ಆಗಿತ್ತು. ಜನರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ
ಬುದ್ದಿವಂತರ ಜಿಲ್ಲೆಯ ಜನರು ತಲೆತಗ್ಗಿಸುವಂತೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು