5:12 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು: ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷ ಹಲ್ಲೆ; ಪಾಪಿ ಸೊಸೆಯ ಬಂಧನ

12/03/2024, 17:30

ಮಂಗಳೂರು(reporterkarnataka.com): ನಗರದ ಕುಲಶೇಖರ ಸಮೀಪ ವೃದ್ಧ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷವಾಗಿ ದೈಹಿಕ ಹಲ್ಲೆ ನಡೆಸಿದ ಸೊಸೆಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.


ಅತ್ತಾವರ ಮೆಸ್ಕಾಂ ಕಚೇರಿಯಲ್ಲಿ ಅಧಿಕಾರಿಯಾಗಿರುವ
ಉಮಾಶಂಕರಿ ಎಂಬವರು ಬಂಧಿತ ಮಹಿಳೆ. ನಾದಿನಿ ಪ್ರಿಯಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಉಮಾಶಂಕರಿ ಅವರ ಪತಿ ವಿದೇಶದಲ್ಲಿ ನೌಕರಿಯಲ್ಲಿದ್ದು, ಮನೆಯಲ್ಲಿ ನಡೆಯುವ ಘಟನೆಯನ್ನು ಸಿಸಿ ಕ್ಯಾಮೆರಾ ಮೂಲಕ ಮೊಬೈಲ್ ನಲ್ಲಿ ನೋಡುತ್ತಿದ್ದರು. ತನ್ನ ಪತ್ನಿ ಅಪ್ಪನ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಕಂಡು ನೊಂದ ಪತಿ, ತನ್ನ ತಂಗಿಯಲ್ಲಿ ಉಮಾಶಂಕರಿ ವಿರುದ್ಧ ದೂರು ನೀಡುವಂತೆ ಸೂಚನೆ ನೀಡಿದ್ದರು.
ಮಾವನ ಮೇಲೆ ಸೊಸೆ ನಡೆಸಿದ ಹಲ್ಲೆಯ ಸಿಸಿ ಕ್ಯಾಮೆರಾ ಪೂಟೇಜ್ ನಿನ್ನೆಯೇ ಎಲ್ಲೆಡೆ ವೈರಲ್ ಆಗಿತ್ತು. ಜನರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ
ಬುದ್ದಿವಂತರ ಜಿಲ್ಲೆಯ ಜನರು ತಲೆತಗ್ಗಿಸುವಂತೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು