9:36 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು: ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷ ಹಲ್ಲೆ; ಪಾಪಿ ಸೊಸೆಯ ಬಂಧನ

12/03/2024, 17:30

ಮಂಗಳೂರು(reporterkarnataka.com): ನಗರದ ಕುಲಶೇಖರ ಸಮೀಪ ವೃದ್ಧ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷವಾಗಿ ದೈಹಿಕ ಹಲ್ಲೆ ನಡೆಸಿದ ಸೊಸೆಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.


ಅತ್ತಾವರ ಮೆಸ್ಕಾಂ ಕಚೇರಿಯಲ್ಲಿ ಅಧಿಕಾರಿಯಾಗಿರುವ
ಉಮಾಶಂಕರಿ ಎಂಬವರು ಬಂಧಿತ ಮಹಿಳೆ. ನಾದಿನಿ ಪ್ರಿಯಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಉಮಾಶಂಕರಿ ಅವರ ಪತಿ ವಿದೇಶದಲ್ಲಿ ನೌಕರಿಯಲ್ಲಿದ್ದು, ಮನೆಯಲ್ಲಿ ನಡೆಯುವ ಘಟನೆಯನ್ನು ಸಿಸಿ ಕ್ಯಾಮೆರಾ ಮೂಲಕ ಮೊಬೈಲ್ ನಲ್ಲಿ ನೋಡುತ್ತಿದ್ದರು. ತನ್ನ ಪತ್ನಿ ಅಪ್ಪನ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಕಂಡು ನೊಂದ ಪತಿ, ತನ್ನ ತಂಗಿಯಲ್ಲಿ ಉಮಾಶಂಕರಿ ವಿರುದ್ಧ ದೂರು ನೀಡುವಂತೆ ಸೂಚನೆ ನೀಡಿದ್ದರು.
ಮಾವನ ಮೇಲೆ ಸೊಸೆ ನಡೆಸಿದ ಹಲ್ಲೆಯ ಸಿಸಿ ಕ್ಯಾಮೆರಾ ಪೂಟೇಜ್ ನಿನ್ನೆಯೇ ಎಲ್ಲೆಡೆ ವೈರಲ್ ಆಗಿತ್ತು. ಜನರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ
ಬುದ್ದಿವಂತರ ಜಿಲ್ಲೆಯ ಜನರು ತಲೆತಗ್ಗಿಸುವಂತೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು