7:10 PM Wednesday23 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆ

16/08/2024, 13:11

ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮಿಲಾಗ್ರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜರೆತ್ ಅವರು ಪವಿತ್ರ ಬಲಿ ಪೂಜೆ ನೆರೆವೇರಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷ ಜೆರಾಲ್ ಜೂಡ್ ಡಿಸಿಲ್ವಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್ ವೇದಿಕೆಯಲ್ಲಿದ್ದರು.
ದ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ತಾರಾನಾಥ್ ಗಟ್ಟಿ, ನಮ್ಮ ದೇಶದ 78ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆಯಲ್ಲಿ ಪ್ರಮುಖ ಸಹಕಾರಿ ಬ್ಯಾಂಕ್, ಎಂಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯೊಂದಿಗೆ ಭಾಗವಹಿಸಲು ಸಂತೋಷವಾಗುತ್ತಿದೆ. ಎಂಸಿಸಿ ಬ್ಯಾಂಕ್ ನೆಲೆ ನಿಂತಿರುವ ‘ಬಾವುಟಗಡ್ಡೆ’ ಪ್ರದೇಶ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪ್ರದೇಶವಾಗಿದ್ದು, ಇಲ್ಲಿನ ಅನೇಕ ಮಹನೀಯರು ತಮ್ಮ ತ್ಯಾಗ ಮತ್ತು ಬಲಿದಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ ಎಂದು ವಿವರಿಸಿದರು. ಭಾರತದ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬ ನಾಗರಿಕನೂ ಎತ್ತಿ ಹಿಡಿಯಬೇಕಾಗಿದೆ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿಯವರು ದೇಶಭಕ್ತಿ ಗೀತೆಗಳನ್ನು ಹಾಡಿ ಸಭಿಕರಲ್ಲಿ ದೇಶಪ್ರೇಮವನ್ನು ಜಾಗೃತಗೊಳಿಸಿದರು.
ಬ್ಯಾಂಕಿನ ಭದ್ರತಾ ಸಿಬ್ಬಂದಿಯಾಗಿ ಸುಮಾರು ಎರಡು ವರ್ಷ ಸೇವೆ ಸಲ್ಲಿಸಿ ಆಕಾಲಿಕವಾಗಿ ನಿಧನರಾದ ದಿವಂಗತ ಗೋಪಾಲಕೃಷ್ಣ ಗಟ್ಟಿ ಅವರಿಗೆ ಶ್ರದ್ದಾಂಜಲಿಯನ್ನು ಸಮರ್ಪಿಸಲಾಯಿತು. ಬ್ಯಾಂಕಿನ ವತಿಯಿಂದ ರೂ.25,೦೦೦/- ಆರ್ಥಿಕ ನೆರವನ್ನು ಅವರ ಕುಟುಂಬಸ್ಥರಿಗೆ ನೀಡಲಾಯಿತು.

ನಿರ್ದೇಶಕರಾದ ಡಾ. ಜೆರಾಲ್ಡ್ ಪಿಂಟೊ, ಆ್ಯಂಡ್ರು ಡಿಸೋಜ, ಅನಿಲ್ ಪತ್ರಾವೊ, ಎಲ್‌ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿಸೋಜ, ಐರಿನ್ ರೆಬೆಲ್ಲೊ, ಡೇವಿಡ್ ಡಿಸೋಜ, ಜೆ.ಪಿ. ರೊಡ್ರಿಗಸ್, ಸುಶಾಂತ್ ಸಿ. ಎ. ಸಲ್ಡಾನ್ಹಾ ಮತ್ತು ಕ್ಲೆಮೆಂಟ್ ಜಿ. ಪಿಂಟೊ, ಆಲ್ವಿನ್ ಪ್ರಶಾಂತ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಹೆರಾಲ್ಡ್ ಮೊಂತೇರೊ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಉಪ ಮಹಾಪ್ರಬಂಧಕ ರಾಜ್ ಎಫ್ ಮಿನೇಜಸ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು.
ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾದ ಡೆರಿಲ್ ಲಸ್ರಾದೊ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು