10:14 PM Monday28 - July 2025
ಬ್ರೇಕಿಂಗ್ ನ್ಯೂಸ್
ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ…

ಇತ್ತೀಚಿನ ಸುದ್ದಿ

ಮಂಗಳೂರು: ನಾಳೆ ‘ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ’ ಕಾರ್ಯಕ್ರಮ

26/09/2023, 20:11

ಮಂಗಳೂರು( reporterkarnataka.com):ಸಂವಾದ ಯುವ ಸಂಪನ್ಮೂಲ ಕೇಂದ್ರ ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ” ಎನ್ನುವ ಕಾರ್ಯಕ್ರಮ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಸೆ.27ರಂದು ನಡೆಯಲಿದೆ.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ. ನಾಯಕ್ ಉದ್ಘಾಟಿಸುವರು. ಯುವಜನರಿಗೆ ಸಂಬಂಧಿಸಿದ ವಿಚಾರ ಗೋಷ್ಠಿಯನ್ನು ಆಯೋಜಿಸಲಾಗಿದ್ದು ಸಂವಾದ ಸಂಸ್ಥೆಯ ಯುವಜನರು ಮಾಡಿರುವ ಅಧ್ಯಯನದ ವಿಷಯ ಮಂಡನೆ ಮತ್ತು ವಿಚಾರ ಮಂಥನ ನಡೆಯಲಿದೆ. ಗೋಷ್ಠಿಯ ಅಧ್ಯಕ್ಷತೆಯನ್ನು ಲೇಖಕಿ, ಚಿಂತಕಿ, ಸಾಮಾಜಿಕ ಹೋರಾಟಗಾರ್ತಿ ಗುಲಾಬಿ ಬಿಳಿಮಲೆ ವಹಿಸಿಕೊಳ್ಳುವರು. ಮಧ್ಯಾಹ್ನ ಜನಪ್ರೀತಿ ಬಳಗದಿಂದ ಹಾಡುಗಳು, ಬಹುತ್ವದ ಗೀತರೂಪಕ, ಸಂವಾದ ಯುವ ಒಡನಾಡಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿರುವುದು. ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರು ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ, ರೆ. ಫಾ. ಮೆಲ್ವಿನ್ ಪಿಂಟೊ, ಮಂಗಳೂರು ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜಕರು ಡಾ. ನಾಗರತ್ನ ಕೆ.ಎ, ಸಂವಾದ ಸಂಸ್ಥೆಯ ಸಹಯಾನ ಪ್ರೋಗ್ರಾಂ ಲೀಡ್ ರಾಮಕ್ಕ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು