1:42 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮಂಗಳೂರು: ನಾಳೆ ‘ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ’ ಕಾರ್ಯಕ್ರಮ

26/09/2023, 20:11

ಮಂಗಳೂರು( reporterkarnataka.com):ಸಂವಾದ ಯುವ ಸಂಪನ್ಮೂಲ ಕೇಂದ್ರ ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ” ಎನ್ನುವ ಕಾರ್ಯಕ್ರಮ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಸೆ.27ರಂದು ನಡೆಯಲಿದೆ.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ. ನಾಯಕ್ ಉದ್ಘಾಟಿಸುವರು. ಯುವಜನರಿಗೆ ಸಂಬಂಧಿಸಿದ ವಿಚಾರ ಗೋಷ್ಠಿಯನ್ನು ಆಯೋಜಿಸಲಾಗಿದ್ದು ಸಂವಾದ ಸಂಸ್ಥೆಯ ಯುವಜನರು ಮಾಡಿರುವ ಅಧ್ಯಯನದ ವಿಷಯ ಮಂಡನೆ ಮತ್ತು ವಿಚಾರ ಮಂಥನ ನಡೆಯಲಿದೆ. ಗೋಷ್ಠಿಯ ಅಧ್ಯಕ್ಷತೆಯನ್ನು ಲೇಖಕಿ, ಚಿಂತಕಿ, ಸಾಮಾಜಿಕ ಹೋರಾಟಗಾರ್ತಿ ಗುಲಾಬಿ ಬಿಳಿಮಲೆ ವಹಿಸಿಕೊಳ್ಳುವರು. ಮಧ್ಯಾಹ್ನ ಜನಪ್ರೀತಿ ಬಳಗದಿಂದ ಹಾಡುಗಳು, ಬಹುತ್ವದ ಗೀತರೂಪಕ, ಸಂವಾದ ಯುವ ಒಡನಾಡಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿರುವುದು. ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರು ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ, ರೆ. ಫಾ. ಮೆಲ್ವಿನ್ ಪಿಂಟೊ, ಮಂಗಳೂರು ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜಕರು ಡಾ. ನಾಗರತ್ನ ಕೆ.ಎ, ಸಂವಾದ ಸಂಸ್ಥೆಯ ಸಹಯಾನ ಪ್ರೋಗ್ರಾಂ ಲೀಡ್ ರಾಮಕ್ಕ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು