1:17 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಆಶ್ರಮವಾಸಿಗಳಿಗೆ ದಿನಸಿ ಕಿಟ್ ವಿತರಣೆ

21/08/2021, 16:25

ಮಂಗಳೂರು(reporterkarnataka.com):   ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ನಗರದ ಕಾಪಿಕಾಡ್ ಬಳಿಯಿರುವ “ಸ್ನೇಹ ದೀಪ” ಆಶ್ರಮದಲ್ಲಿ ಆಶ್ರಮವಾಸಿಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸುವ  ಮೂಲಕ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಪ್ರಕಾಶ್  ಬಿ. ಸಾಲ್ಯಾನ್ ಮಾತನಾಡಿ, ದಿವಂಗತ ರಾಜೀವ್ ಗಾಂಧಿಯವರು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆ ಹಾಗೂ ದಿ. ದೇವರಾಜ್ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಳುವವನಿಗೆ  ಭೂ ಒಡೆತನದ ಹಕ್ಕನ್ನು ನೀಡುವ ಮೂಲಕ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ  ಕಾರ್ಯ ಮಾಡಿದವರು ಎಂದು ಹೇಳಿದರು.

ಮಾಜಿ ಮೇಯರ್ ಮಹಾಬಲ ಮಾರ್ಲ, ಮಾಜಿ ಉಪಮೇಯರ್ ರಜನೀಶ್ ಕಾಪಿಕಾಡ್,  ಸ್ನೇಹ ದೀಪ ಆಶ್ರಮದ ಅಧ್ಯಕ್ಷ ತಪಸಂ, 
ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ, ನಗರ ಬ್ಲಾಕ್ ಪ್ರಧಾನ ಕಾರ್ಯದಶಿ ಯೋಗೀಶ್ ನಾಯಕ, ನಗರ ಬ್ಲಾಕ್ ಕಾರ್ಮಿಕ ಅಧ್ಯಕ್ಷ ಜಯರಾಜ್ ಕೋಟ್ಯಾನ್ ,ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರುಗಳಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಕುಮಾರ್, ನಗರ ಬ್ಲಾಕ್  ಕಿಸಾನ್ ಘಟಕದ ಅಧ್ಯಕ್ಷ ರಿತೇಶ್ ಅಂಚನ್, ನಗರ ಬ್ಲಾಕ್ ಪರಿಶಿಷ್ಟ ಘಟಕದ ಅಧ್ಯಕ್ಷ ಮಿಥುನ ಉರ್ವಾ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿನಿರಜ್ ಪಾಲ್, ಲಕ್ಷ್ಮಣ್ ಶೆಟ್ಟಿ,ಗಿರೀಶ್ ಶೆಟ್ಟಿ, ಶೇಕ್ ಕೈಫ್, ಉದಯ್ ಆಚಾರ್, ಫಯಾಜ್ ,ಇಸ್ಮಾಯಿಲ್, ಕ್ಲಿಪ್ಬೋರ್ಡ್ ಸೊನ್ಸ್, ಸಂಶುದ್ದೀನ್ ಬಂದರ್ 
ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ  ರಾಕೇಶ್ ದೇವಾಡಿಗ ಸ್ವಾಗತಿಸಿದರು. ವಾರ್ಡ್ ಅಧ್ಯಕ್ಷ ರಾಜೇಂದ್ರ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸಮರ್ಥ ಭಟ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು