9:57 AM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ: ಪರಿಹಾರಕ್ಕೆ ‘ಕೋಬ್ರಾ’ ಜಾರಿ

17/05/2023, 14:20

ಮಂಗಳೂರು(reporterlarnataka.com): ನಗರದ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಕೋಬ್ರಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಟ್ರಾಫಿಕ್ ಜಾಮ್ ಉಂಟಾದ ಸ್ಥಳಕ್ಕೆ ಕ್ಷಿಪ್ರವಾಗಿ ತಲುಪಲು ಇದು ಪೊಲೀಸರಿಗೆ ಸಹಾಯವಾಗಲಿದೆ.


ಮಂಗಳೂರು ನಗರದಲ್ಲಿ ವಾಹನ ಸಂಚಾರದ ಒತ್ತಡ ಅತೀ ಹೆಚ್ಚಾಗಿದ್ದು, ಇತ್ತೀಚಿನ ದಿನಗಳಲಂತೂ ಸಂಚಾರ ಪೊಲೀಸರಿಗೆ ಸಂಚಾರ ನಿರ್ವಹಣೆ ಒಂದು ಸವಾಲಾಗಿ ಪರಿಣಮಿಸಿದೆ. ನಗರದಲ್ಲಿ ಸುಗಮ ಸಂಚಾರವನ್ನು ಜಾರಿ ಮಾಡಲು ಎಷ್ಟೇ ಆಧುನಿಕ ತಂತ್ರಜ್ಞಾನಗಳನ್ನು ಬಳಸಿದರೂ ಸಹ ಸಂಚಾರ ಪೊಲೀಸರ ಇರುವಿಕೆಯು ಅನಿವಾರ್ಯವಾಗಿರುತ್ತದೆ. ಕೆಲವು ಸಂದರ್ಭಗಳಲ್ಲಿ ಸಣ್ಣ ಪುಟ್ಟ ಅಪಘಾತ ಸಂಭವಿಸಿ ವಾಹನ ಸವಾರರುಗಳು ಜಗಳವಾಡಿಕೊಂಡ ಸಂದರ್ಭದಲ್ಲಿ ವಾಹನಗಳನ್ನು ರಸ್ತೆಯ ಮಧ್ಯದಲ್ಲಿಯೇ ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಾರೆ ಹಾಗೂ ಇಂತಹ ಇತರೆ ಹಲವಾರು ಸಮಯಗಳಲ್ಲಿ ಆ ಸ್ಥಳಕ್ಕೆ ತುರ್ತಾಗಿ ಹೋಗಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಕಾರಿಯಾಗುವಂತೆ ಮಂಗಳೂರು ನಗರದಲ್ಲಿ, ನಾಲ್ಕು ‘ಕೋಬ್ರಾ’ ದ್ವಿಚಕ್ರ ವಾಹನಗಳನ್ನು ಮೇ 16ರಂದು ಸಂಚಾರ ಪೂರ್ವ ಪೊಲೀಸ್ ಠಾಣೆ ಮತ್ತು ಸಂಚಾರ ಪಶ್ಚಿಮ ಪೊಲೀಸ್ ಠಾಣೆಗೆ ಉಪಯೋಗಿಸಿಕೊಂಡು ಸಂಚಾರ ಸುವ್ಯವಸ್ಥೆ ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಸ್ತಾಂತರಿಸಲಾಗಿದೆ. ಈ ‘ಕೋಬ್ರಾ’ ದ್ವಿಚಕ್ರ ವಾಹನಗಳನ್ನು ಠಾಣಾ ಸರಹದ್ದಿನಲ್ಲಿ ನೊಂದವರಿಗೆ ಸಹಕರಿಸಲು ಕ್ರಮ ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು