11:06 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸಮಗ್ರ ಮೂಲ ಸೌಕರ್ಯ; ಮಂಗಳೂರು ಮಹಾನಗರ ಪಾಲಿಕೆಗೆ 165 ಕೋಟಿ ಅನುದಾನ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

27/01/2025, 00:06

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮಗ್ರ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ 2024-25ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ ಒಟ್ಟು 165 ಕೋಟಿ ರೂ. ಅನುದಾನವನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


ನಗರದ ನೆಹರೂ ಮೈದಾನದಲ್ಲಿ ಭಾನುವಾರ ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಸಂದೇಶ ನೀಡಿದರು.
ಈ ಯೋಜನೆಯಲ್ಲಿ ಒಟ್ಟು 25 ಕಾಮಗಾರಿಗಳನ್ನು ಪ್ರಸ್ತಾವಿಸಲಾಗಿದ್ದು, ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಕೆ ಹಂತದಲ್ಲಿದೆ. ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.


ಮಂಗಳೂರು ಹಳೆ ಬಂದರು ವ್ಯಾಪ್ತಿಯಲ್ಲಿ 11 ತೇಲುವ ಜೆಟ್ಟಿ ಕಾಮಗಾರಿಗಳು ಮಂಜೂರಾಗಿವೆ. ಉಳ್ಳಾಲ ಕೋಡಿಯಲ್ಲಿ ನಾಡದೋಣಿಗಳು ತಂಗುವ ಜೆಟ್ಟಿ ನಿರ್ಮಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಮಂಗಳೂರು ಮೀನುಗಾರಿಕಾ ಬಂದರಿನ 3ನೇ ಹಂತದ ಕಾಮಗಾರಿಗೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದರು.
ಈಗಾಗಲೇ ಅಸ್ತಿತ್ವದಲ್ಲಿರುವ ಜೀವ- ಸಾರ್ಥಕತೆ ಅಂಗಕಸಿ ಯೋಜನೆ ವಿಸ್ತರಣೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ರಾಜ್ಯದ ಆದ್ಯತಾ ಕಾರ್ಡ್‌ ಹೊಂದಿರುವವರಿಗೆ ಈ ಯೋಜನೆಯಡಿ ಹೃದಯ, ಶ್ವಾಸಕೋಶ ಮತ್ತು ಮೂಳೆ ಮಜ್ಜೆಯ ಕಸಿಯ ಸೌಲಭ್ಯ ವಿಸ್ತರಿಸಲು 30 ಕೋಟಿ ರು. ಒದಗಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 15, 18 ಮತ್ತು 21 ಲಕ್ಷ ರು.ಗಳ ಮೂರು ಪ್ಯಾಕೇಜ್‌ಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದರು.


ಹಲವು ವರ್ಷಗಳ ಬಳಿಕ ನಡೆದ ಕರಾವಳಿ ಉತ್ಸವದಲ್ಲಿ ನಿರೀಕ್ಷೆ ಮೀರಿ ಜನರು, ಪ್ರವಾಸಿಗರು ಭಾಗವಹಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಪ್ರದರ್ಶನ, ಯುವ ಉತ್ಸವ, ಶ್ವಾನ ಪ್ರದರ್ಶನ, ಕಲಾ ಪರ್ಬ, ಕಾರು ಮತ್ತು ಬೈಕ್‌ಗಳ ಪ್ರದರ್ಶನ, ಬೀಚ್‌ ಉತ್ಸವ, ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಇತ್ಯಾದಿ ಕಾರ್ಯಕ್ರಮಗಳು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದೆ. ಈ ಎಲ್ಲ ಕಾರ್ಯಕ್ರಮಗಳನ್ನು ನಿರಂತರವಾಗಿ ಮುಂದುವರಿಸಲು ವಾರ್ಷಿಕ ಉತ್ಸವವಾಗಿ ನಿಗದಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.



*ಕ್ರೀಡೆಗೆ ಪ್ರೋತ್ಸಾಹ:*
ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣವನ್ನು ಶೀಘ್ರ ಕ್ರೀಡಾಪಟುಗಳ ಬಳಕೆಗೆ ಸಮರ್ಪಿಸಲಾಗುವುದು. ನೆಹರೂ ಮೈದಾನದ ಫುಟ್‌ಬಾಲ್‌ ಮೈದಾನದಲ್ಲಿ ಉನ್ನತ ಸೌಲಭ್ಯಗಳನ್ನು ಒದಗಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಮಂಗಳೂರು, ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ವಿದ್ಯಾರ್ಥಿ ನಿಲಯ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ 4 ಹೊಸ ಹಾಸ್ಟೆಲ್‌ಗಳನ್ನು ಆರಂಭಿಸಲಾಗಿದ್ದು, ಇದರಲ್ಲಿ 400 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ. ಹಾಸ್ಟೆಲ್‌ ಸೀಟ್‌ ದೊರಕದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಪ್ರತಿ ತಿಂಗಳು ತಲಾ 1500 ರೂ. ನಂತೆ 10 ತಿಂಗಳಿಗೆ 15 ಸಾವಿರ ರೂ. ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೈನಿಕ ತರಬೇತಿ ಶಾಲೆ ನಡೆಯುತ್ತಿದ್ದು, ಪ್ರತಿವರ್ಷ 200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ವಿವಿಧ ಸೇನಾ ಹುದ್ದೆಗಳಿಗೆ ಹಲವರು ಆಯ್ಕೆಯಾಗಿದ್ದಾರೆ ಎಂದು ವಿವರಿಸಿದರು.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಸಂಸದ ಕ್ಯಾ. ಬ್ರಿಜೇಶ್‌ ಚೌಟ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಮಂಜುನಾಥ ಭಂಡಾರಿ, ಮೇಯರ್‌ ಮನೋಜ್‌ ಕುಮಾರ್‌, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್‌ ಗಟ್ಟಿ, ಕೊಕಂಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್‌, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್‌ ಯು.ಎಚ್‌., ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್‌, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಪೊಲೀಸ್‌ ಆಯುಕ್ತ ಅನುಪಮ್‌ ಅಗ್ರವಾಲ್‌, ಜಿಪಂ ಸಿಇಒ ಡಾ. ಆನಂದ್‌ ಕೆ., ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌., ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್‌, ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್‌ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು