9:46 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Mangaluru | ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಸೆರೆ

10/11/2025, 19:08

ಮಂಗಳೂರು(reporterkarnataka.com):ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ, ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್‌ ಶೆಟ್ಟಿ (53) ಎಂಬವರ ದೂರಿನಂತೆ, ಸದ್ರಿಯವರ ಮನೆಯ ಸಮೀಪ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಶೆಟ್ಟಿರವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ದಿನಾಂಕ:9/11/2025 ರಂದು ಬೆಳಿಗ್ಗೆ, ಪ್ರೇಮಾರವರ ಮಗಳು ಪಿರ್ಯಾದಿದಾರರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ ವ್ಯಕ್ತಿ ಕಳ್ಳತನಕ್ಕೆ ಬಂದಿರುವಂತೆ ಸಿ.ಸಿ ಟಿ.ವಿಯಲ್ಲಿ ಕಾಣುತ್ತಿರುವುದಾಗಿ ತಿಳಿಸಿರುತ್ತಾರೆ. ತಕ್ಷಣ ಪಿರ್ಯಾದಿದಾರರು ಪ್ರೇಮರವರ ಮನೆಯ ಬಳಿ ತೆರಳಿ ನೋಡಿದಾಗ, ಪ್ರೇಮಾರವರ ಮನೆಯ ಮೇಲ್ಚಾವಣಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯು ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ನಿಂತುಕೊಂಡಿದ್ದು, ಪಿರ್ಯಾದಿದಾರರನ್ನು ನೋಡಿ ಕೆಳಗೆ ಹಾರಿ ಓಡಿ ತಪ್ಪಿಸಲು ಪ್ರಯತ್ನಿಸಿರುತ್ತಾನೆ. ಈ ವೇಳೆ ಪಿರ್ಯಾದಿದಾರರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಸದ್ರಿ ಅಪರಿಚಿತ ವ್ಯಕ್ತಿಯು ಆತನ ಕೈಯಲ್ಲಿದ್ದ ರಾಡಿನಿಂದ ಹಲ್ಲೆ ನಡೆಸಿರುತ್ತಾನೆ. ಬಳಿಕ ಸ್ಥಳೀಯ ನಿವಾಸಿಗಳ ಸಹಾಯದಿಂದ ಅಪರಿಚಿತ ವ್ಯಕ್ತಿಯನ್ನು ಹಿಡಿಯಲಾಗಿರುತ್ತದೆ. ಆತನ ಬಗ್ಗೆ ವಿಚಾರಿಸಲಾಗಿ ಆತನು ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ ಎಂಬುದಾಗಿ ತಿಳಿಸಿದ್ದು, ನಂತರ ಆತನನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿರುತ್ತದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2025, ಕಲಂ: 331(1) 62 118(1) 307 BNS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು