9:20 AM Friday27 - June 2025
ಬ್ರೇಕಿಂಗ್ ನ್ಯೂಸ್
BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ… ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;… Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ… ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ… ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

Mangaluru | ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದಲ್ಲಿ ‘ನೋವೇಶನ್ 2025’ ಅಂತಾರಾಷ್ಟ್ರೀಯ ಸಮ್ಮೇಳನ

27/04/2025, 16:16

ಮಂಗಳೂರು(reporterkarnataka.com): ಸೈಂಟ್ ಅಲೋಶಿಯಸ್ (ಸ್ವಾಯತ್ತ ವಿಶ್ವವಿದ್ಯಾಲಯ), ಏಮಿಟ್(AIMIT) ಬೀರಿ ಕ್ಯಾಂಪಸಿನ ಎಂಬಿಎ ವಿಭಾಗ, ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್ ನಡೆಸಿದ 8ನೇ ಅಂತಾರಾಷ್ಟ್ರೀಯ ಸಮ್ಮೇಳನ ‘ನೋವೇಶನ್ 2025’: ಇಂಡಸ್ಟ್ರಿ 5.0, 6.0 ಮತ್ತು ಅದರ ಮುಂಬರುವ ತಂತ್ರಜ್ಞಾನಗಳಲ್ಲಿ ನಾವೀನ್ಯತೆಗಳು – ಭವಿಷ್ಯದ ವ್ಯವಸ್ಥಾ ಮಾದರಿಗಳ ಅಭಿವೃದ್ಧಿ ಎಂಬ ವಿಷಯದ ಮೇಲೆ ಏರ್ಪಡಿಸಲಾಯಿತು.


ಉದ್ಘಾಟನೆಯ ಮುಖ್ಯ ಅತಿಥಿ ಎಂ.ಆರ್.ಪಿ.ಎಲ್.ನ ಮುಖ್ಯ ಜನರಲ್ ಮ್ಯಾನೇಜರ್(ಎಚ್.ಆರ್), ಸಂದೇಶ್ ಜೆ. ಕುಟೀನ್ಹೋ ಪ್ರಭು, ಮುಂದಿನ ದಶಕದಲ್ಲಿ (5.0) ಮತ್ತು ಅದರ ನಂತರದ ದಶಕದಲ್ಲಿ (6.0) ಸಂಭವಿಸಬಹುದಾದ ಬದಲಾವಣೆಗಳು ಮತ್ತು ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮಾನವ ಶಕ್ತಿಯನ್ನು ಸಜ್ಜುಗೊಳಿಸುವ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಉದ್ಯಮದ ಬದಲಾವಣೆಗಳ ಅಗತ್ಯತೆಗಳನ್ನು ಪೂರೈಸಲು ಅವರು ಚುರುಕುತನ (Agility), ಹೊಂದಾಣಿಕೆ (Adaptability), ಮತ್ತು ಸಾಮರಸ್ಯ (Alignment) ಎಂಬ ಮೂರು ಎ (AAA) ಸೂತ್ರಗಳನ್ನು ನೀಡಿದರು.
ನ್ಯೂಯಾರ್ಕಿನ ಸ್ಟೇಟ್ ಯೂನಿವರ್ಸಿಟಿ ಆಫ್ ಆಲ್ಬನಿಯ ಪ್ರೊಫೆಸರ್ (ಡಾ.) ಡೇವಿಡ್ ಎಂ. ಸ್ಮಿತ್; ಮಾರಿಷಸ್ ಸರ್ಕಾರದ ಹಣಕಾಸು ಸಚಿವಾಲಯದ ಡಾ. ಯತಿನ್ ಮತ್ತು ಲೊಯೊಲಾ ಕಾಲೇಜ್ ಆಫ್ ಸೋಷಿಯಲ್ ಸೈನ್ಸಸ್ (ಸ್ವಾಯತ್ತ), ತಿರುವನಂತಪುರಂನ ಪ್ರಾಧ್ಯಾಪಕ ಡಾ. ಫಾ. ರಂಜಿತ್ ಜಾರ್ಜ್ ಎಸ್.ಜೆ. ಸಮ್ಮೇಳನದ ಪ್ರಮುಖ ಭಾಷಣಕಾರರಾಗಿ ಭಾಗವಹಿಸಿದ್ದರು. ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರೋನಾಲ್ಡ್ ನಜರೆತ್, ಉದ್ಘಾಟನೆಯ ಅಧ್ಯಕ್ಷತೆ ವಹಿಸಿದ್ದರು, ಏಮಿಟ್(AIMIT)ಯ ನಿರ್ದೇಶಕ ಡಾ. (ಫಾದರ್) ಕಿರಣ್ ಕೋತ್ ಎಸ್.ಜೆ., ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್’ನ ಡೀನ್ ಡಾ. ರಜನಿ ಸುರೇಶ್, ಸಭೆಯನ್ನು ಸ್ವಾಗತಿಸಿದರು ಮತ್ತು ಸಮ್ಮೇಳನದ ಅವಲೋಕನವನ್ನು ನೀಡಿದರು.
60ಕ್ಕೂ ಹೆಚ್ಚು ಸಂಶೋಧನಾ ಪತ್ರಗಳನ್ನು ಶಿಕ್ಷಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಸ್ತುತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು