6:20 AM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

Mangaluru | ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದಲ್ಲಿ ‘ನೋವೇಶನ್ 2025’ ಅಂತಾರಾಷ್ಟ್ರೀಯ ಸಮ್ಮೇಳನ

27/04/2025, 16:16

ಮಂಗಳೂರು(reporterkarnataka.com): ಸೈಂಟ್ ಅಲೋಶಿಯಸ್ (ಸ್ವಾಯತ್ತ ವಿಶ್ವವಿದ್ಯಾಲಯ), ಏಮಿಟ್(AIMIT) ಬೀರಿ ಕ್ಯಾಂಪಸಿನ ಎಂಬಿಎ ವಿಭಾಗ, ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್ ನಡೆಸಿದ 8ನೇ ಅಂತಾರಾಷ್ಟ್ರೀಯ ಸಮ್ಮೇಳನ ‘ನೋವೇಶನ್ 2025’: ಇಂಡಸ್ಟ್ರಿ 5.0, 6.0 ಮತ್ತು ಅದರ ಮುಂಬರುವ ತಂತ್ರಜ್ಞಾನಗಳಲ್ಲಿ ನಾವೀನ್ಯತೆಗಳು – ಭವಿಷ್ಯದ ವ್ಯವಸ್ಥಾ ಮಾದರಿಗಳ ಅಭಿವೃದ್ಧಿ ಎಂಬ ವಿಷಯದ ಮೇಲೆ ಏರ್ಪಡಿಸಲಾಯಿತು.


ಉದ್ಘಾಟನೆಯ ಮುಖ್ಯ ಅತಿಥಿ ಎಂ.ಆರ್.ಪಿ.ಎಲ್.ನ ಮುಖ್ಯ ಜನರಲ್ ಮ್ಯಾನೇಜರ್(ಎಚ್.ಆರ್), ಸಂದೇಶ್ ಜೆ. ಕುಟೀನ್ಹೋ ಪ್ರಭು, ಮುಂದಿನ ದಶಕದಲ್ಲಿ (5.0) ಮತ್ತು ಅದರ ನಂತರದ ದಶಕದಲ್ಲಿ (6.0) ಸಂಭವಿಸಬಹುದಾದ ಬದಲಾವಣೆಗಳು ಮತ್ತು ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮಾನವ ಶಕ್ತಿಯನ್ನು ಸಜ್ಜುಗೊಳಿಸುವ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಉದ್ಯಮದ ಬದಲಾವಣೆಗಳ ಅಗತ್ಯತೆಗಳನ್ನು ಪೂರೈಸಲು ಅವರು ಚುರುಕುತನ (Agility), ಹೊಂದಾಣಿಕೆ (Adaptability), ಮತ್ತು ಸಾಮರಸ್ಯ (Alignment) ಎಂಬ ಮೂರು ಎ (AAA) ಸೂತ್ರಗಳನ್ನು ನೀಡಿದರು.
ನ್ಯೂಯಾರ್ಕಿನ ಸ್ಟೇಟ್ ಯೂನಿವರ್ಸಿಟಿ ಆಫ್ ಆಲ್ಬನಿಯ ಪ್ರೊಫೆಸರ್ (ಡಾ.) ಡೇವಿಡ್ ಎಂ. ಸ್ಮಿತ್; ಮಾರಿಷಸ್ ಸರ್ಕಾರದ ಹಣಕಾಸು ಸಚಿವಾಲಯದ ಡಾ. ಯತಿನ್ ಮತ್ತು ಲೊಯೊಲಾ ಕಾಲೇಜ್ ಆಫ್ ಸೋಷಿಯಲ್ ಸೈನ್ಸಸ್ (ಸ್ವಾಯತ್ತ), ತಿರುವನಂತಪುರಂನ ಪ್ರಾಧ್ಯಾಪಕ ಡಾ. ಫಾ. ರಂಜಿತ್ ಜಾರ್ಜ್ ಎಸ್.ಜೆ. ಸಮ್ಮೇಳನದ ಪ್ರಮುಖ ಭಾಷಣಕಾರರಾಗಿ ಭಾಗವಹಿಸಿದ್ದರು. ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರೋನಾಲ್ಡ್ ನಜರೆತ್, ಉದ್ಘಾಟನೆಯ ಅಧ್ಯಕ್ಷತೆ ವಹಿಸಿದ್ದರು, ಏಮಿಟ್(AIMIT)ಯ ನಿರ್ದೇಶಕ ಡಾ. (ಫಾದರ್) ಕಿರಣ್ ಕೋತ್ ಎಸ್.ಜೆ., ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್’ನ ಡೀನ್ ಡಾ. ರಜನಿ ಸುರೇಶ್, ಸಭೆಯನ್ನು ಸ್ವಾಗತಿಸಿದರು ಮತ್ತು ಸಮ್ಮೇಳನದ ಅವಲೋಕನವನ್ನು ನೀಡಿದರು.
60ಕ್ಕೂ ಹೆಚ್ಚು ಸಂಶೋಧನಾ ಪತ್ರಗಳನ್ನು ಶಿಕ್ಷಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಸ್ತುತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು