6:35 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಂಗಳೂರು ಪಿ.ಎ. ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ಅಂತಾರಾಷ್ಟ್ರೀಯ ಸಮಾವೇಶ ಉದ್ಘಾಟನೆ

24/04/2024, 19:38

ಮಂಗಳೂರು(reporterkarnataka.com): ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ-2024 (ಐಸಿಇಎಸ್ಟಿ-24) ಕುರಿತ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶದ ಉದ್ಘಾಟನೆ ಏಪ್ರಿಲ್ 23ರಂದು ನಗರದ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ನಡೆಯಿತು.
ICEST-24 ಒಟ್ಟು ಆರು ಸಮ್ಮೇಳನಗಳನ್ನು ಒಳಗೊಂಡಿದ್ದು, ವಿಭಿನ್ನ ಎಂಜಿನಿಯರಿಂಗ್ ವಿಭಾಗಗಳನ್ನು ಪ್ರತಿನಿಧಿಸುತ್ತದೆ.
ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ಇನ್ಫೋಸಿಸ್ ಹಿರಿಯ ಯೋಜನಾ ವ್ಯವಸ್ಥಾಪಕ ಸೋಹನ್ ಎಂ. ಅವರು ಮಾತನಾಡಿ, ತಾಂತ್ರಿಕ ಶಿಕ್ಷಣದ ಪ್ರಗತಿಯಲ್ಲಿ ಬಹುಶಿಸ್ತೀಯ ವಿಧಾನಗಳ ಪ್ರಾಮುಖ್ಯತೆಯನ್ನು ವಿವರಿಸಿದರು.
ಮುಖ್ಯ ಭಾಷಣ ಮಾಡಿದ ವಿಗ್ನಾನ್ (Vignan’s) ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ. ಪಿ. ನಾಗಭೂಷಣ್ ಅವರು ಮಾತನಾಡಿ ಪ್ರಸಕ್ತ ಸನಿವೇಶದಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವವನ್ನು ಚರ್ಚಿಸಿದರು ಮತ್ತು ಸ್ಮಾರ್ಟ್ ಯುಗದಲ್ಲಿ ಕಂಪ್ಯೂಟರ್, ಕೃತಕ ಬುದ್ಧಿಮತ್ತೆ ಜ್ಞಾನದ ಜೊತೆಗೆ ಇತರ ವಿಷಯದ ಜ್ಞಾನ ಅಗತ್ಯ ಎಂದರು.
ಅಬ್ದುಲ್ಲಾ ಇಬ್ರಾಹಿಂ, ಮ್ಯಾನೇಜಿಂಗ್ ಟ್ರಸ್ಟಿ ಪಿ.ಎ. ಸಮೂಹ ಸಂಸ್ಥೆಗಳು ಮಂಗಳೂರು ಇವರು ಮಾತನಾಡಿ, ಸಂಶೋಧನೆ ಮತ್ತು ಅದರ ಪ್ರಭಾವದ ಬಗ್ಗೆ ಮಾತನಾಡಿದರು. ಪಿ.ಎ. ಕಾಲೇಜಿನಲ್ಲಿನ ವಿವಿಧ ಸಂಶೋಧನಾ ಕೇಂದ್ರಗಳ ಸಂಶೋಧನೆಗೆ ಪೂರಕ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಗೌರವ ಅತಿಥಿಗಳಾದ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಇದರ ಪ್ರಾಂಶುಪಾಲರಾದ ಡಾ. ಸಲೀಮುಲ್ಲಾ ಖಾನ್ ಮತ್ತು ಪಿ.ಎ ಪಾಲಿಟೆಕ್ ನ ಪ್ರಾಂಶುಪಾಲರಾದ ಡಾ. ಕೆ.ಪಿ. ಸೂಫಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ICEST-24 ನ ಜನರಲ್ ಚೇರ್ ಮತ್ತು ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ರಮಿಸ್ ಎಂ.ಕೆ ಅವರು ಅಧ್ಯಕ್ಷತೆ ವಹಿಸಿದ್ದರು.
ಪಿ.ಎ ಸಮೂಹ ಸಂಸ್ಥೆಗಳ ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ. ಸಯ್ಯದ್ ಅಮೀನ್ ಅಹ್ಮದ್ ಮತ್ತು ಹ್ಯಾರಿಸ್ ಟಿ.ಡಿ., ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಇತರೆ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಅಬ್ದುಲ್ ಅಬ್ದು ಸಮದ್ ಪ್ರಾರ್ಥಿಸಿದರು, ICEST-24 ರ ಸಂಯೋಜಕ ಡಾ. ಶರೀಫ್ರಾಜು ಜೆ. ಉಕ್ಕುಂದ್ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಡಾ. ಶರ್ಮಿಳಾ ಕುಮಾರಿ ಪ್ರಸ್ತಾವಿಕ ಭಾಷಣ ಮಾಡಿದರು. ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣ ಪ್ರಸಾದ್ ಎನ್. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು