12:51 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಮಂಗಳೂರು ಪಿ.ಎ. ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್

10/05/2024, 13:29

ಮಂಗಳೂರು(reporterkarnataka.com): ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್
ಮಂಗಳೂರಿನ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಬ್ಲಡ್ ಡೋನರ್ ದಿನದ ಅಂಗವಾಗಿ ಬ್ಲಡ್ ಡೊನೇಶನ್ ಕ್ಯಾಂಪ್ ಮೇ 7ರಂದು ಕಾಲೇಜಿನ ಈ-ಲಾರ್ನಿಂಗ್ ಸೆಂಟರಿನಲ್ಲಿ ನೆರವೇರಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಳೆ ಶಸ್ತ್ರ ಚಿಕಿತ್ಸಕರು ಹಾಗೂ ದ.ಕ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಉಪಸಮಿತಿಯ ಅಧ್ಯಕ್ಷರಾದ ಡಾ. ಬಿ. ಸಚ್ಚಿದಾನಂದ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ ರಕ್ತದಾನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುವುದು” ಎಂದರು.


ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಅತಿಥಿಗಳಾದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲೆಯ ನಿರೂಪಕರಾದ ಪ್ರವೀಣ್ ಕುಮಾರ್, ಇಕೋಲಾಬ್ ಕೆ.ಎಸ್.ಎ. ಇದರ ಮಾಜಿ ಸೇಲ್ಸ್ ಎಂಡ್ ಮಾರ್ಕೆಟಿಂಗ್ ಮ್ಯಾನೇಜರ್ ಅಬ್ಬಾಸ್ ಉಚ್ಚಿಲ, ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ.ರಮೀಝ್ ಎಂ. ಕೆ., ಪಿ.ಎ. ಫಾರ್ಮಸಿಯ ಪ್ರಾಂಶುಪಾಲರಾದ ಸಲೀಮುಲ್ಲಾ ಖಾನ್, ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಪಿಸಿಯೋಥೆರಪಿಯ ಉಪಪ್ರಾಂಶುಪಾಲರಾದ ಡಾ.ಆಯಿಶಾ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಯೂತ್ ರೆಡ್ ಕ್ರಾಸಿನ ನಿರ್ವಾಹಕ ಅಹ್ಮದ್ ಬಶೀರ್, ಎನ್.ಎಸ್.ಎಸ್. ನಿರ್ವಾಹಕರಾದ ಚೈತ್ರಾ ಎನ್.ವಿ. ಮತ್ತು ಇತಾಶ್ರೀ, ಹಾಗೂ ಐ.ಕ್ಯೂ.ಎ.ಸಿ ಯ ನಿರೂಪಕರಾದ ವಾಣಿಶ್ರೀ ವೇದಿಕೆಯಲ್ಲಿ ಆಸೀನರಾಗಿದ್ದರು.
ವಿದ್ಯಾರ್ಥಿಗಳಾದ ಶಫ್ನಾ ಶೆರೀನ್ ಸ್ವಾಗತಿಸಿದರೆ ಇಬ್ರಾಹಿಂ ಅರ್ಫಾನ್ ವಂದಿಸಿದರು. ಸಲ್ಮಾ ಐಪ್ನಾ ಕಾರ್ಯಕ್ರಮವನ್ನು ನಿರೂಪಿಸಿದರು.
167 ದಾನಿಗಳಿಂದ ರಕ್ತವನ್ನು ಸಂಗ್ರಹಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು