12:27 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮಂಗಳೂರು ಪಿ.ಎ. ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್

10/05/2024, 13:29

ಮಂಗಳೂರು(reporterkarnataka.com): ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್
ಮಂಗಳೂರಿನ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಬ್ಲಡ್ ಡೋನರ್ ದಿನದ ಅಂಗವಾಗಿ ಬ್ಲಡ್ ಡೊನೇಶನ್ ಕ್ಯಾಂಪ್ ಮೇ 7ರಂದು ಕಾಲೇಜಿನ ಈ-ಲಾರ್ನಿಂಗ್ ಸೆಂಟರಿನಲ್ಲಿ ನೆರವೇರಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಳೆ ಶಸ್ತ್ರ ಚಿಕಿತ್ಸಕರು ಹಾಗೂ ದ.ಕ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಉಪಸಮಿತಿಯ ಅಧ್ಯಕ್ಷರಾದ ಡಾ. ಬಿ. ಸಚ್ಚಿದಾನಂದ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ ರಕ್ತದಾನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುವುದು” ಎಂದರು.


ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಅತಿಥಿಗಳಾದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲೆಯ ನಿರೂಪಕರಾದ ಪ್ರವೀಣ್ ಕುಮಾರ್, ಇಕೋಲಾಬ್ ಕೆ.ಎಸ್.ಎ. ಇದರ ಮಾಜಿ ಸೇಲ್ಸ್ ಎಂಡ್ ಮಾರ್ಕೆಟಿಂಗ್ ಮ್ಯಾನೇಜರ್ ಅಬ್ಬಾಸ್ ಉಚ್ಚಿಲ, ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ.ರಮೀಝ್ ಎಂ. ಕೆ., ಪಿ.ಎ. ಫಾರ್ಮಸಿಯ ಪ್ರಾಂಶುಪಾಲರಾದ ಸಲೀಮುಲ್ಲಾ ಖಾನ್, ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಪಿಸಿಯೋಥೆರಪಿಯ ಉಪಪ್ರಾಂಶುಪಾಲರಾದ ಡಾ.ಆಯಿಶಾ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಯೂತ್ ರೆಡ್ ಕ್ರಾಸಿನ ನಿರ್ವಾಹಕ ಅಹ್ಮದ್ ಬಶೀರ್, ಎನ್.ಎಸ್.ಎಸ್. ನಿರ್ವಾಹಕರಾದ ಚೈತ್ರಾ ಎನ್.ವಿ. ಮತ್ತು ಇತಾಶ್ರೀ, ಹಾಗೂ ಐ.ಕ್ಯೂ.ಎ.ಸಿ ಯ ನಿರೂಪಕರಾದ ವಾಣಿಶ್ರೀ ವೇದಿಕೆಯಲ್ಲಿ ಆಸೀನರಾಗಿದ್ದರು.
ವಿದ್ಯಾರ್ಥಿಗಳಾದ ಶಫ್ನಾ ಶೆರೀನ್ ಸ್ವಾಗತಿಸಿದರೆ ಇಬ್ರಾಹಿಂ ಅರ್ಫಾನ್ ವಂದಿಸಿದರು. ಸಲ್ಮಾ ಐಪ್ನಾ ಕಾರ್ಯಕ್ರಮವನ್ನು ನಿರೂಪಿಸಿದರು.
167 ದಾನಿಗಳಿಂದ ರಕ್ತವನ್ನು ಸಂಗ್ರಹಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು