5:03 AM Sunday14 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್: ಸೇಕ್ರೆಡ್ ಹಾರ್ಟ್ ವಾರ್ಡಿನ ವಾರ್ಷಿಕೋತ್ಸವ

13/06/2026, 13:16

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಸೇಕ್ರೆಡ್ ಹಾರ್ಟ್ ವಾರ್ಡಿನ ವಾರ್ಷಿಕೋತ್ಸವವನ್ನು ಅನಿಲ್ ಮತ್ತು ಮರ್ಲಿನ್ ಅವರ ಮನೆಯ ಸಭಾಂಗಣದಲ್ಲಿ ಬಲಿ ಪೂಜೆಯೊಂದಿಗೆ ಆಚರಿಸಲಾಯಿತು.
ಅಶಕ್ತ ಹಾಗೂ ನಡೆಯಲು ಸಾಧ್ಯವಾಗದ ಸದಸ್ಯರೊಬ್ಬರಿಗಾಗಿ ಈ ಬಲಿ ಪೂಜೆಯನ್ನು ಏರ್ಪಡಿಸಲಾಗಿತ್ತು.
ಚರ್ಚ್ ನ ಪ್ರಧಾನ ಧರ್ಮಗುರು ಹಾಗೂ ಸಿಟಿ ವಲಯದ ವಿಗಾರ್ ವಾರ್ ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಬಲಿ ಪೂಜೆಯನ್ನು ನೆರವೇರಿಸಿ ಆಶೀರ್ವಚನ ನೀಡಿದರು.
ಅತಿಥಿಯಾಗಿ ಆಗಮಿಸಿದ್ದ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಅವರು ಮಾತನಾಡಿ ವಾರ್ಡಿನಲ್ಲಿ ಸರ್ವರ ಸಹಕಾರದಿಂದ ಕೆಲಸ ಕಾರ್ಯಗಳು ನಡೆಯುತ್ತವೆ. ಎಲ್ಲಾ ಸದಸ್ಯರು ಒಗ್ಗೂಡಿ ವಾರ್ಡಿನ ಮುಖ್ಯಸ್ಥರಿಗೆ ಸಹಕರಿಸುತ್ತಿದ್ದಾರೆ. ವಾರ್ಡಿನ ಪ್ರತಿಭೆಗಳು ಬೆಳಕಿಗೆ ಬರುವಲ್ಲಿ ಇಂತಹ ವಾರ್ಷಿಕೋತ್ಸವ ಕಾರ್ಯಕ್ರಮಗಳು ನೆರವಾಗುತ್ತವೆ ಎಂದು ಹೇಳಿದರು.
ಚರ್ಚ್ ನ ಧರ್ಮಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಾತನಾಡಿ ವಾರ್ಡಿನ ಬೆಳವಣಿಗೆ, ಶಿಸ್ತು ಮತ್ತು ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯದರ್ಶಿ ರೋಷನ್ ಮೊಂತೇರೊ , ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ ಅವರು ಶುಭಾಶಯ ಸಲ್ಲಿಸಿದರು.
ವಾರ್ಡಿನ ಮುಖ್ಯಸ್ಥರಾದ ಮೋಲಿ ರೊಡ್ರಿಗಸ್ ಸ್ವಾಗತಿಸಿದರು. ಪ್ರತಿನಿಧಿಗಳಾದ ರಿಚಾರ್ಡ್ ಮಾರ್ಟಿಸ್, ಸಬಿನಾ ಮಿನೇಜಸ್, ಜೊಸ್ಸಿ ಕುಟಿನೊ ಉಪಸ್ಥಿತರಿದ್ದರು. ಲವೀನಾ ಸೆರಾವೊ ಕಾರ್ಯಕ್ರಮ ನಿರ್ವಹಿಸಿ ಸ್ವೀನಿ ರೊಡ್ರಿಗಸ್ ವಂದಿಸಿದರು. ಸಹ ಭೋಜನ ದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು