3:48 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ವಾರ್ಷಿಕ ಹಬ್ಬ: ಸಮುದಾಯ ದಿನಾಚರಣೆ; ಚರ್ಚ್ ನ ವಿಂಶತಿ ಸಂಭ್ರಮ

15/02/2026, 17:53

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಾರ್ಷಿಕ ಹಬ್ಬ,ಸಮುದಾಯ ದಿನಾಚರಣೆ ಮತ್ತು ಚರ್ಚ್ ಗೆ ಇಪ್ಪತ್ತು ವರ್ಷ ತುಂಬಿದ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಬೆಳಗ್ಗೆ 8 ಗಂಟೆಗೆ ಹಬ್ಬದ ಸಂಭ್ರಮದ ಬಲಿ ಪೂಜೆ ನಡೆಯಿತು. ಬಲಿ ಪೂಜೆಯ ನೇತೃತ್ವವನ್ನು ವಹಿಸಿದ್ದ ಬೆಂಗಳೂರಿನ ಸೈಂಟ್ ಜಾನ್ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಡೈರೆಕ್ಟರ್ ವಂದನೀಯ ಫಾ. ಅಜಿತ್ ಮಿನೇಜಸ್ ತಮ್ಮ ಧರ್ಮೋಪದೇಶದಲ್ಲಿ ಸಮುದಾಯ ದಿನಾಚರಣೆಯ ಮಹತ್ವವನ್ನು ವಿವರಿಸಿ, ಮನುಷ್ಯ ಸಂಘ ಜೀವಿಯಾಗಿ ಸಮುದಾಯದಲ್ಲಿ ಜೀವಿಸುತ್ತಾನೆ. ತನ್ನ ಮನೆ, ತಮ್ಮ ನೆರೆ ಕರೆ, ತನ್ನ ವಾರ್ಡ್, ತನ್ನ ಚರ್ಚ್ ನಿಂದ ಬೇರ್ಪಟ್ಟು ಜೀವಿಸಿದರೆ ಆತ ಒಂಟಿಯಾಗುತ್ತಾನೆ. ಯಾರೇ ಆದರೂ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಟಿಪ್ಪಣಿ ಬರುವುದು ಸಹಜ. ಅದನ್ನು ಮೆಟ್ಟಿ ನಿಂತು ತನ್ನ ಕೆಲಸ ಮುಂದುವರಿಸ ಬೇಕು. ಸಮಾಜದಲ್ಲಿ ಸಂಘ ಜೀವಿಯಾಗಿ ಬದುಕಿದರೆ ಯಶಸ್ಸು ಹಾಗೂ ಮನಶ್ಯಾಂತಿ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.
ಬಲಿ ಪೂಜೆಯಲ್ಲಿ ಭಾಗವಹಿಸಿದ್ದ ಕಾರವಾರ ಧರ್ಮ ಕ್ಷೇತ್ರದ ವಂದನೀಯ ಫಾ. ಪಾವುವಸ್ತೀನ್ ಪೂರ್ತಾಡೋ ಅವರು ಭಕ್ತ ವೃಂದವನ್ನು ಆಶೀರ್ವದಿಸಿದರು.
ಬಲಿ ಪೂಜೆಯಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಹಬ್ಬ ಆಚರಣೆಗೆ ಸಹಕರಿಸಿದವರನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.


ಸಂಜೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ವಂದನೀಯ ಫಾ. ಅಜಿತ್ ಮಿನೇಜಸ್ ಮತ್ತು ಇತರ ಗುರುಗಳು ಶುಭ ಕೋರಿದರು ಹಾಗೂ ಊಟದ ವ್ಯವಸ್ಥೆಯ ಮೇಲೆ ಆಶೀರ್ವಚನ ನೀಡಿದರು.
ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಡಿಯಾಕೋನ್ ರೋವಿನ್ ಲೋಪೆಜ್, ಆಹಾರ ಸಮಿತಿಯ ಸಂಯೋಜಕ ಆಲ್ಬನ್ ಮೊಂತೇರೊ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಮಾರಿಯೋ ರೇಗೊ, ಆಧ್ಯಾತ್ಮಿಕ ಸಮಿತಿಯ ಸಂಯೋಜಕ ಆಸ್ಟಿನ್ ಮೊಂತೇರೊ, ಗಾಯನ ಮಂಡಳಿಯ ಅಧ್ಯಕ್ಷರಾದ ಲಿಝಿ ಫೆರ್ನಾಂಡಿಸ್ ಮತ್ತು ಇತರರು ಉಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು