12:14 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್: ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ

22/09/2025, 10:35

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ ಭಾನುವಾರ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಅಸಿಸಿ ಪ್ರೆಸ್ ನ ನಿರ್ದೇಶಕ ಹಾಗೂ ಸೇವಕ್ ಕೊಂಕಣಿ ಪತ್ರಿಕೆಯ ಸಂಪಾದಕ ವಂದನೀಯ ಫಾ. ಚೇತನ್ ಲೋಬೊ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ವಾರ್ಡ್ ದಿನಾಚರಣೆಯಿಂದ ಕುಟುಂಬದ ಏಕತೆ, ವಾರ್ಡಿನ ಸದಸ್ಯರಲ್ಲಿ ಅನ್ಯೋನ್ಯತೆ ಹಾಗೂ ಪರಸ್ಪರ ಹೊಂದಾಣಿಕೆ ಹೆಚ್ಚುತ್ತದೆ ಎಂದರು.
ಅತಿಥಿಯಾಗಿದ್ದ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಾತನಾಡಿ ವಾರ್ಡ್ ದಿನಾಚರಣೆಯಿಂದ ವಾರ್ಡಿನ ಸದಸ್ಯರ ಪ್ರತಿಭೆಯನ್ನು ಗುರುತಿಸ ಬಹುದು ಹಾಗೂ ವಾರ್ಡಿನ ಒಗ್ಗಟ್ಟು ಹೆಚ್ಚಿಸಿ ಕೊಳ್ಳ ಬಹುದು ಎಂದರು.
ವಾರ್ಡಿನ ಮುಖ್ಯಸ್ಥರಾದ ಜೆಸಿಂತಾ ಫೆರ್ನಾಂಡಿಸ್ ಸ್ವಾಗತಿಸಿದರು. ವಾರ್ಡಿನ ಎಲ್ಲಾ ಸದಸ್ಯರಿಂದಲೂ ವಿವಿಧ ವಿನೋದಾವಳಿ ನಡೆಯಿತು.
ವಾರ್ಡಿನ ಹಿರಿಯ ನಾಗರಿಕರನ್ನು, ಸಾಧಕರನ್ನು ಮತ್ತು ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು. ವಂದನೀಯ ಫಾ. ಚೇತನ್ ಲೋಬೊ ಅವರನ್ನು ಕೂಡಾ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರತಿನಿಧಿಗಳಾದ ವಿನ್ಸೆಂಟ್ ಬಾರೆಟ್ಟೊ ಮತ್ತು ವೆಲೆಂಟಿನಾ ರೊಡ್ರಿಗಸ್ ಉಪಸ್ಥಿತರಿದ್ದರು. ಮಾರಿಯೋ ರೇಗೊ ವಂದಿಸಿದರು. ಲೊಲಿಟಾ ಪ್ರೆಂಟೇರಿಯೋ ಕಾರ್ಯಕ್ರಮ ನಿರೂಪಿಸಿದರು. ಲ್ಯಾನ್ಸಿ ಪಿಂಟೊ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು