6:42 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್: ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ

22/09/2025, 10:35

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಕಾಲ್ವರಿ ವಾರ್ಡಿನ ವಾರ್ಷಿಕ ದಿನಾಚರಣೆ ಭಾನುವಾರ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಅಸಿಸಿ ಪ್ರೆಸ್ ನ ನಿರ್ದೇಶಕ ಹಾಗೂ ಸೇವಕ್ ಕೊಂಕಣಿ ಪತ್ರಿಕೆಯ ಸಂಪಾದಕ ವಂದನೀಯ ಫಾ. ಚೇತನ್ ಲೋಬೊ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ವಾರ್ಡ್ ದಿನಾಚರಣೆಯಿಂದ ಕುಟುಂಬದ ಏಕತೆ, ವಾರ್ಡಿನ ಸದಸ್ಯರಲ್ಲಿ ಅನ್ಯೋನ್ಯತೆ ಹಾಗೂ ಪರಸ್ಪರ ಹೊಂದಾಣಿಕೆ ಹೆಚ್ಚುತ್ತದೆ ಎಂದರು.
ಅತಿಥಿಯಾಗಿದ್ದ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಾತನಾಡಿ ವಾರ್ಡ್ ದಿನಾಚರಣೆಯಿಂದ ವಾರ್ಡಿನ ಸದಸ್ಯರ ಪ್ರತಿಭೆಯನ್ನು ಗುರುತಿಸ ಬಹುದು ಹಾಗೂ ವಾರ್ಡಿನ ಒಗ್ಗಟ್ಟು ಹೆಚ್ಚಿಸಿ ಕೊಳ್ಳ ಬಹುದು ಎಂದರು.
ವಾರ್ಡಿನ ಮುಖ್ಯಸ್ಥರಾದ ಜೆಸಿಂತಾ ಫೆರ್ನಾಂಡಿಸ್ ಸ್ವಾಗತಿಸಿದರು. ವಾರ್ಡಿನ ಎಲ್ಲಾ ಸದಸ್ಯರಿಂದಲೂ ವಿವಿಧ ವಿನೋದಾವಳಿ ನಡೆಯಿತು.
ವಾರ್ಡಿನ ಹಿರಿಯ ನಾಗರಿಕರನ್ನು, ಸಾಧಕರನ್ನು ಮತ್ತು ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು. ವಂದನೀಯ ಫಾ. ಚೇತನ್ ಲೋಬೊ ಅವರನ್ನು ಕೂಡಾ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರತಿನಿಧಿಗಳಾದ ವಿನ್ಸೆಂಟ್ ಬಾರೆಟ್ಟೊ ಮತ್ತು ವೆಲೆಂಟಿನಾ ರೊಡ್ರಿಗಸ್ ಉಪಸ್ಥಿತರಿದ್ದರು. ಮಾರಿಯೋ ರೇಗೊ ವಂದಿಸಿದರು. ಲೊಲಿಟಾ ಪ್ರೆಂಟೇರಿಯೋ ಕಾರ್ಯಕ್ರಮ ನಿರೂಪಿಸಿದರು. ಲ್ಯಾನ್ಸಿ ಪಿಂಟೊ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು