3:09 AM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ

07/07/2024, 15:39

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನೆರವೇರಿತು.
ಬೆಳಗ್ಗಿನ ಬಲಿಪೂಜೆಯ ಸಂದರ್ಭದಲ್ಲಿ ಚರ್ಚ್ ಪ್ರಧಾನ ಗುರು ಹಾಗೂ ಸಂಘಟನೆಯ ನಿರ್ದೇಶಕ ಫಾ. ಆಲ್ಬನ್ ಡಿ’ಸೋಜಾ ಅವರು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಐಸಿವೈಎಂ ನೂತನ ಅಧ್ಯಕ್ಷ ವಿಲ್ಸನ್‌ ಪಿಂಟೊ, ಕಾರ್ಯದರ್ಶಿ ವೆನಿಶಾ ಪಿಂಟೊ, ಉಪಾಧ್ಯಕ್ಷೆ ವಿಯೋಲಾ ಡಿ’ಸೋಜಾ, ಜತೆ ಕಾರ್ಯದರ್ಶಿ ಡಿಯೋನ್ ಫೆರ್ನಾಂಡಿಸ್‌, ಖಜಾಂಚಿ ಫ್ರೀಡಲ್‌ ಡಿ’ಸೋಜಾ, “ಆಂಮ್ಚೊ ಯುವಕ್‌’ ಪ್ರತಿನಿಧಿ ಆ್ಯಶೆಲ್‌ ಲೋಬೊ, ರೆಡ್‌ ಡ್ರಾಪ್‌ ಪ್ರತಿನಿಧಿ ಗ್ಲ್ಯಾವಿನ್‌ ಡಿ’ಸೋಜಾ, ಕ್ರೀಡಾ ಕಾರ್ಯದರ್ಶಿ ಬ್ರೆಂಡನ್‌ ಪಿರೇರಾ, ಆಧ್ಯಾತ್ಮಿಕ ಕಾರ್ಯದರ್ಶಿ ವಿನೋಲಾ ಪಿಂಟೊ, ನಿಕಟ ಪೂರ್ವ ಅಧ್ಯಕ್ಷ ರಾಯನ್‌ ನೊರೊನ್ಹಾ, ವಲಯ ಪ್ರತಿನಿಧಿ ವಿಲೀಶಾ ಬ್ರ್ಯಾಗ್ಸ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಆಧ್ಯಾತ್ಮಿಕ ನಿರ್ದೇಶಕ ಫಾ. ಆಲ್ಬನ್‌ ಡಿ’ಸೋಜಾ, ಸಂಘಟನೆಯ ಸಚೇತಕ ಹಾಗೂ ಮದರ್ ತೆರೆಸಾ ವಾರ್ಡ್ ಮುಖ್ಯಸ್ಥ ರೋಶನ್‌ ಮೊಂತೇರೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು