11:06 PM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

Mangaluru | ಪಣಂಬೂರು ಜಂಕ್ಷನ್‌: ಸರಣಿ ಅಪಘಾತಕ್ಕೆ ಆಟೋದಲ್ಲಿ 3 ಮಂದಿ ದಾರುಣ ಸಾವು

15/11/2025, 21:26

ಮಂಗಳೂರು(reporterkarnataka.com): ನಗರದ ಪಣಂಬೂರು ಜಂಕ್ಷನ್‌ ನಲ್ಲಿ ಇಂದು ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಬೆಳಗ್ಗೆ ಸುಮಾರು 11. 15 ಗಂಟೆಗೆ ಪಣಂಬೂರು ಜಂಕ್ಷನ್‌ ನಲ್ಲಿ ದನ ಒಂದು ರಸ್ತೆ ದಾಟುತ್ತಿರುವುದನ್ನು ನೋಡಿ ಮೊದಲಿಗೆ ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ನ್ನು ಚಾಲಕ ನಿಲ್ಲಿಸಿದ್ದಾರೆ. ಅದರ ಹಿಂದೆ ಬರುತ್ತಿದ್ದ ಆಟೋರಿಕ್ಷಾ ನಿಲ್ಲಿಸಿದಾಗ ಅದರ ಹಿಂದೆ ಇದ್ದಂತಹ ಇನ್ನೋವಾ ಕಾರ್ ನ ಚಾಲಕನು ಕೂಡ ನಿಲ್ಲಿಸಿದ್ದಾನೆ. ಇದೇ ಸಂದರ್ಭದಲ್ಲಿ ಹಿಂದುಗಡೆಯಿಂದ ಬರುತ್ತಿದ್ದ ಇನ್ನೊಂದು ಟ್ಯಾಂಕರ್ ರಭಸವಾಗಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇನೋವಾ ಕಾರು ಎಡಗಡೆಗೆ ಇದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಎರಡು ಟ್ಯಾಂಕರ್ ನ ಮಧ್ಯೆ ಸಿಲುಕಿಕೊಂಡ ರಿಕ್ಷಾ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸೇರಿದಂತೆ 3 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು