5:09 AM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

Mangaluru | ಪಣಂಬೂರು ಜಂಕ್ಷನ್‌: ಸರಣಿ ಅಪಘಾತಕ್ಕೆ ಆಟೋದಲ್ಲಿ 3 ಮಂದಿ ದಾರುಣ ಸಾವು

15/11/2025, 21:26

ಮಂಗಳೂರು(reporterkarnataka.com): ನಗರದ ಪಣಂಬೂರು ಜಂಕ್ಷನ್‌ ನಲ್ಲಿ ಇಂದು ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಬೆಳಗ್ಗೆ ಸುಮಾರು 11. 15 ಗಂಟೆಗೆ ಪಣಂಬೂರು ಜಂಕ್ಷನ್‌ ನಲ್ಲಿ ದನ ಒಂದು ರಸ್ತೆ ದಾಟುತ್ತಿರುವುದನ್ನು ನೋಡಿ ಮೊದಲಿಗೆ ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ನ್ನು ಚಾಲಕ ನಿಲ್ಲಿಸಿದ್ದಾರೆ. ಅದರ ಹಿಂದೆ ಬರುತ್ತಿದ್ದ ಆಟೋರಿಕ್ಷಾ ನಿಲ್ಲಿಸಿದಾಗ ಅದರ ಹಿಂದೆ ಇದ್ದಂತಹ ಇನ್ನೋವಾ ಕಾರ್ ನ ಚಾಲಕನು ಕೂಡ ನಿಲ್ಲಿಸಿದ್ದಾನೆ. ಇದೇ ಸಂದರ್ಭದಲ್ಲಿ ಹಿಂದುಗಡೆಯಿಂದ ಬರುತ್ತಿದ್ದ ಇನ್ನೊಂದು ಟ್ಯಾಂಕರ್ ರಭಸವಾಗಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇನೋವಾ ಕಾರು ಎಡಗಡೆಗೆ ಇದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಎರಡು ಟ್ಯಾಂಕರ್ ನ ಮಧ್ಯೆ ಸಿಲುಕಿಕೊಂಡ ರಿಕ್ಷಾ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸೇರಿದಂತೆ 3 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು