6:01 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್: ಬೀಳ್ಕೊಡುಗೆ ಸಮಾರಂಭ

22/03/2026, 20:23

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಡಿಯಾಕೋನ್ ಆಗಿದ್ದ ರೋವಿನ್ ಲೋಪೆಜ್ ಅವರನ್ನು ಬೀಳ್ಕೊಡಲಾಯಿತು.
ಕಳೆದ ಆರು ತಿಂಗಳುಗಳಿಂದ ಪಾಲ್ದನೆ ಚರ್ಚ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಚರ್ಚ್ ಧರ್ಮಗುರುಗಳಾದ ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರೊಂದಿಗೆ ಸಹಕರಿಸುತ್ತಿದ್ದು, ಮುಂದಿನ ತಿಂಗಳ 29 ರಂದು ಕಪುಚಿನ್ ಧರ್ಮಗುರುಗಳಾಗಿ ಗುರು ದೀಕ್ಷೆಯನ್ನು ಹೊನ್ನಾವರ ಚರ್ಚ್ ನಲ್ಲಿ ಸ್ವೀಕರಿಸಲಿದ್ದಾರೆ.
ವಿದಾಯ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ . ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ ಶುಭ ಹಾರೈಸಿದರು.
ಚರ್ಚ್ ನ ಜನರಿಂದ ದೊರೆತ ಸಹಕಾರದ ಬಗ್ಗೆ ಡಿಯಾಕೋನ್ ರೋವಿನ್ ಲೋಪೆಜ್ ಅವರು ಕೃತಜ್ಞತಾ ಭಾವನೆಯೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ರೋಶನ್ ಮೊಂತೇರೊ ಪುಷ್ಪಾರ್ಚನೆಗೈದರು. ಸರ್ವ ಆಯೋಗಗಳ ಸಂಚಾಲಕ ವಿಲಿಯಂ ಲೋಬೊ ಉಪಸ್ಥಿತರಿದ್ದರು.
ಮಾಜಿ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು