8:23 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Mangaluru | ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ: ಕರಪತ್ರ ಬಿಡುಗಡೆ

23/08/2025, 15:56

ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಜರುಗಿತು.
70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿದೆ.
ಕಾರ್ಯಕ್ರಮದ ವರ್ಣರಂಜಿತ ಕರಪತ್ರವನ್ನು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಅವರು ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟಾನಿ ಆಲ್ವಾರೀಸ್ ಅವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು. ಸೆಪ್ಟೆಂಬರ್ 11ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಹಲವರು ಸಭೆಯಲ್ಲಿ ಮಾತನಾಡುವ ಮೂಲಕ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಕೆಥೋಲಿಕ್ ಸಭಾದ ಅಧ್ಯಕ್ಷರಾದ ಸಂತೋಷ್ ಡಿಸೋಜ ಬಜಪೆ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನಾಯಕರಾದ ಲಕ್ಷ್ಮಣ್, ಯೆನಪೋಯ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಜೀವನ್ ರಾಜ್ ಕುತ್ತಾರ್, ಸಂತ ಅಲೋಶಿಯಸ್ ಕಾಲೇಜ್ ನ ಪ್ರಾಧ್ಯಾಪಕರಾದ ಫ್ಲೋರಾ ಕ್ಯಾಸ್ಟಲಿನೋ, ಸಾಮರಸ್ಯ ಮಂಗಳೂರು ಅಧ್ಯಕ್ಷರಾದ ಮಂಜುಳಾ ನಾಯಕ್, ಮಹಿಳಾ ಮುಖಂಡರಾದ ಸುಮತಿ ಎಸ್. ಹೆಗ್ಡೆ, ವೇದಿಕೆಯ ಪ್ರಮುಖರಾದ ಡೋಲ್ಫಿ ಡಿಸೋಜ ಅವರು ಉಪಸ್ಥಿತರಿದ್ದರು.*
ಕಾರ್ಯಕ್ರಮದಲ್ಲಿ ವೇದಿಕೆಯ ಪ್ರಮುಖರಾದ ಸ್ಟಾನಿ ಲೋಬೋ, ಡಾ ಕೃಷ್ಣಪ್ಪ ಕೊಂಚಾಡಿ, ಡಾ.ವಸಂತ ಕುಮಾರ್, ಕೆ ಕರಿಯ,ಎರಿಕ್ ಲೋಬೋ, ಫ್ಲೇವಿ ಕ್ರಾಸ್ತಾ ಅತ್ತಾವರ, ಮರ್ಲಿನ್ ರೇಗೋ, ಬಿ. ಎನ್‌. ದೇವಾಡಿಗ, ಮಿಥುನ್ ರಾಜ್ ಕುತ್ತಾರ್, ಅಶೋಕನ್ ಬೋಳಾರ, ಸಂತೋಷ್ ಡಿಸೋಜ ಪಂಜಿಮೊಗರು, ಸಮರ್ಥ್ ಭಟ್, ಗ್ರೆಟ್ಟಾ ಟೀಚರ್, ಎಸ್. ಎಲ್. ಪಿಂಟೋ,ಆಲ್ವಿನ್ ಡಿಸೋಜ, ಅಸುಂತ ಡಿಸೋಜ, ವಿದ್ಯಾ ಶೆಣೈ, ಜೆ ಇಬ್ರಾಹಿಂ ಜೆಪ್ಪು,ಹೆಝಲ್ ಟೀಚರ್,ಕ್ವೀನಿ‌ ಪರ್ಸಿ ಆನಂದ್, ಪುರುಷೋತ್ತಮ ಪೂಜಾರಿ, ಫ್ಲೋರಿನ್ ಡಿಸೋಜ, ಅರುಣ್ ಡಿಸೋಜ ಶಕ್ತಿನಗರ, ಸಂತೋಷ್ ಬಜಾಲ್, ಯೋಗೀಶ್ ಜಪ್ಪಿನಮೊಗರು,ಟೋನಿ ಪಿಂಟೊ, ಚರಣ್ ಶೆಟ್ಟಿ, ನವೀನ್ ಕೊಂಚಾಡಿ, ಫೆಲಿಕ್ಸ್ ಡಿಸೋಜ, ರಾಕೇಶ್ ಕುಂದರ್, ಓಸ್ವಾಲ್ಡ್ ಪುರ್ತಾಡೋ,ಜೇಮ್ಸ್ ಪ್ರವೀಣ್, ಕಮಲಾಕ್ಷ ಜಲ್ಲಿಗುಡ್ಡ,ರವೀಂದ್ರ ವಾಮಂಜೂರು, ಕ್ರಿಸ್ಟನ್ ಮೆನೇಜಸ್, ಶೇಖರ್ ವಾಮಂಜೂರು, ನಿತಿನ್ ಬಂಗೇರ ಯೆಯ್ಯಾಡಿ, ತಯ್ಯುಬ್ ಬೆಂಗರೆ, ರೆಹಮಾನ್ ಖಾನ್ ಕುಂಜತ್ತಬೈಲ್, ಜ್ಯೋತಿ, ಮಹಮ್ಮದ್ ಆಯೂಬ್ ಷಾ, ನೀತಾ ಡಿಸೋಜ, ಶೈಲಜಾ ರಾಜೇಶ್, ಕೃಷ್ಣ ಇನ್ನಾ ಮುಂತಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು