7:52 PM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Mangaluru | ಅಪಘಾತಕ್ಕೀಡಾದ ಕಾರು ಬಿಡಿಸಲು 50 ಸಾವಿರ ರೂ. ಲoಚದ ಬೇಡಿಕೆ: ಪೊಲೀಸ್ ಹೆಡ್‌ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

10/07/2025, 21:44

ಮಂಗಳೂರು(reporterkarnataka.com): ಲಂಚ ಪಡೆಯುತ್ತಿದ್ದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ.
ಕಾರು-ಸ್ಕೂಟರ್ ಅಪಘಾತ ಪ್ರಕರಣದಲ್ಲಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚ 50 ಸಾವಿರ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಡ್‌ಕಾನ್ಸ್ಟೇಬಲ್ ತಸ್ಲಿಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಘಟನೆ ವಿವರ: ನಗರದ ನಂತೂರು ಸರ್ಕಲ್‌ನಲ್ಲಿ ನಡೆದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ ಮಾಲಕರು ಎಲ್ಲವನ್ನೂ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಬಳಿಕ ತನ್ನ ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಳ್ಳಲು ಹೋದಾಗ ಹೆಡ್ ಕಾನ್ಸ್ಟೇಬಲ್ ತಸ್ಲಿಂ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಈ ಸಂಬಂಧ ಕಾರಿನ ಮಾಲಕರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಕದ್ರಿ ಠಾಣೆಯ ಇಬ್ಬರು ಹೆಡ್ ಕಾನ್ಸ್‌ಸ್ಟೇಬಲ್‌ಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ತಸ್ಲಿಂನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು