4:55 PM Saturday21 - June 2025
ಬ್ರೇಕಿಂಗ್ ನ್ಯೂಸ್
ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರನ್ನು ರಾಜ್ಯದ 2ನೇ ನಗರವಾಗಿ ಅಭಿವೃದ್ಧಿಪಡಿಸುವ ಕನಸಿದೆ: ಗೃಹ ಸಚಿವ ಡಾ. ಪರಮೇಶ್ವರ್

30/11/2024, 20:12

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೋಮುಶಕ್ತಿ ಸಮಾಜಕ್ಕೆ ಕಂಟಕ. ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿ ಬೆಳೆಯಲು ಅವಕಾಶ ಕೊಡಬೇಡಿ ಎಂದು ಈ ಹಿಂದೆ ಹೇಳಿದ್ದೆ. ಗೃಹ ಸಚಿನವಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ, ಇಲ್ಲಿ ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ್ದೆ. ಅದು ಬಹಳಷ್ಟು ಯಶಸ್ವಿಯಾಗಿದೆ ಎಂಬ ನಂಬಿಕೆಯಿದೆ. ಈಗ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.


ನಗರದ ಪಾಂಡೇಶ್ವರ ಪೊಲೀಸ್ ಲೇನ್ ನಲ್ಲಿ ನೂತನ ಪೊಲೀಸ್ ವಸತಿಗೃಹ ಉದ್ಘಾಟಿಸಿ ಅವರು ಮಾತನಾಡಿದರು.
ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ ಬಳಿಕ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ. ಈ ಭಾಗದಲ್ಲಿ ಶಾಂತಿ ನೆಲೆಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ ಮಂಗಳೂರಿಗೆ ವಿಶೇಷ ಸ್ಥಾನ ಇತ್ತು. ನಾವು ಘಟ್ಟದವರು ಬಹಳ ಅಭಿಮಾನ ಇಟ್ಟು ಬರುತ್ತಿದ್ದೆವು. ಹಾಗೆ ಮಂಗಳೂರನ್ನು ಕರ್ನಾಟಕದ ಎರಡನೇ ಸಿಟಿಯಾಗಿ ಮಾಡಬೇಕೆಂಬ ಕನಸು ಇದೆ. ಇಲ್ಲಿ ಗೋಲ್ಡನ್, ಡೈಮಂಡ್ ಜುವೆಲ್ಲರಿ ತಯಾರಿಸುವ ಎಸ್ಇಝೆಡ್ ಮಾಡಬೇಕೆಂದು ಪ್ರಣಾಳಿಕೆ ಇದೆ‌. ಇನ್ನೂ ಮೂರು ವರ್ಷ ಇದೆ, ಮಾಡುತ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.
ಮೂರು ಬಾರಿ ಗೃಹ ಸಚಿವನಾಗಿದ್ದೇನೆ, ಬೇರೆ ಯಾರಿಗೂ ರಾಜ್ಯದಲ್ಲಿ ಇಂತಹ ಅವಕಾಶ ಸಿಕ್ಕಿಲ್ಲ. ಕೆಪಿಸಿಸಿ ಅಧ್ಯಕ್ಷನಾದಾಗ ಅದು ಆರು ತಿಂಗಳು ಅಷ್ಟೇ ಅಂತಿದ್ದರು.‌ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ.‌
ವೇದಿಕೆಯಲ್ಲಿ ಶಾಸಕ ಅಶೋಕ್ ರೈ, ಎಂಎಲ್ಸಿ ಐವಾನ್ ಡಿಸೋಜ, ಐಜಿಪಿ ಅಮಿತ್ ಸಿಂಗ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು