6:57 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಂಗಳೂರನ್ನು ರಾಜ್ಯದ 2ನೇ ನಗರವಾಗಿ ಅಭಿವೃದ್ಧಿಪಡಿಸುವ ಕನಸಿದೆ: ಗೃಹ ಸಚಿವ ಡಾ. ಪರಮೇಶ್ವರ್

30/11/2024, 20:12

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೋಮುಶಕ್ತಿ ಸಮಾಜಕ್ಕೆ ಕಂಟಕ. ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿ ಬೆಳೆಯಲು ಅವಕಾಶ ಕೊಡಬೇಡಿ ಎಂದು ಈ ಹಿಂದೆ ಹೇಳಿದ್ದೆ. ಗೃಹ ಸಚಿನವಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ, ಇಲ್ಲಿ ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ್ದೆ. ಅದು ಬಹಳಷ್ಟು ಯಶಸ್ವಿಯಾಗಿದೆ ಎಂಬ ನಂಬಿಕೆಯಿದೆ. ಈಗ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.


ನಗರದ ಪಾಂಡೇಶ್ವರ ಪೊಲೀಸ್ ಲೇನ್ ನಲ್ಲಿ ನೂತನ ಪೊಲೀಸ್ ವಸತಿಗೃಹ ಉದ್ಘಾಟಿಸಿ ಅವರು ಮಾತನಾಡಿದರು.
ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ ಬಳಿಕ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ. ಈ ಭಾಗದಲ್ಲಿ ಶಾಂತಿ ನೆಲೆಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ ಮಂಗಳೂರಿಗೆ ವಿಶೇಷ ಸ್ಥಾನ ಇತ್ತು. ನಾವು ಘಟ್ಟದವರು ಬಹಳ ಅಭಿಮಾನ ಇಟ್ಟು ಬರುತ್ತಿದ್ದೆವು. ಹಾಗೆ ಮಂಗಳೂರನ್ನು ಕರ್ನಾಟಕದ ಎರಡನೇ ಸಿಟಿಯಾಗಿ ಮಾಡಬೇಕೆಂಬ ಕನಸು ಇದೆ. ಇಲ್ಲಿ ಗೋಲ್ಡನ್, ಡೈಮಂಡ್ ಜುವೆಲ್ಲರಿ ತಯಾರಿಸುವ ಎಸ್ಇಝೆಡ್ ಮಾಡಬೇಕೆಂದು ಪ್ರಣಾಳಿಕೆ ಇದೆ‌. ಇನ್ನೂ ಮೂರು ವರ್ಷ ಇದೆ, ಮಾಡುತ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.
ಮೂರು ಬಾರಿ ಗೃಹ ಸಚಿವನಾಗಿದ್ದೇನೆ, ಬೇರೆ ಯಾರಿಗೂ ರಾಜ್ಯದಲ್ಲಿ ಇಂತಹ ಅವಕಾಶ ಸಿಕ್ಕಿಲ್ಲ. ಕೆಪಿಸಿಸಿ ಅಧ್ಯಕ್ಷನಾದಾಗ ಅದು ಆರು ತಿಂಗಳು ಅಷ್ಟೇ ಅಂತಿದ್ದರು.‌ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ.‌
ವೇದಿಕೆಯಲ್ಲಿ ಶಾಸಕ ಅಶೋಕ್ ರೈ, ಎಂಎಲ್ಸಿ ಐವಾನ್ ಡಿಸೋಜ, ಐಜಿಪಿ ಅಮಿತ್ ಸಿಂಗ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು