5:17 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಂಗಳೂರನ್ನು ರಾಜ್ಯದ 2ನೇ ನಗರವಾಗಿ ಅಭಿವೃದ್ಧಿಪಡಿಸುವ ಕನಸಿದೆ: ಗೃಹ ಸಚಿವ ಡಾ. ಪರಮೇಶ್ವರ್

30/11/2024, 20:12

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೋಮುಶಕ್ತಿ ಸಮಾಜಕ್ಕೆ ಕಂಟಕ. ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿ ಬೆಳೆಯಲು ಅವಕಾಶ ಕೊಡಬೇಡಿ ಎಂದು ಈ ಹಿಂದೆ ಹೇಳಿದ್ದೆ. ಗೃಹ ಸಚಿನವಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ, ಇಲ್ಲಿ ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ್ದೆ. ಅದು ಬಹಳಷ್ಟು ಯಶಸ್ವಿಯಾಗಿದೆ ಎಂಬ ನಂಬಿಕೆಯಿದೆ. ಈಗ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.


ನಗರದ ಪಾಂಡೇಶ್ವರ ಪೊಲೀಸ್ ಲೇನ್ ನಲ್ಲಿ ನೂತನ ಪೊಲೀಸ್ ವಸತಿಗೃಹ ಉದ್ಘಾಟಿಸಿ ಅವರು ಮಾತನಾಡಿದರು.
ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ ಬಳಿಕ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ. ಈ ಭಾಗದಲ್ಲಿ ಶಾಂತಿ ನೆಲೆಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ ಮಂಗಳೂರಿಗೆ ವಿಶೇಷ ಸ್ಥಾನ ಇತ್ತು. ನಾವು ಘಟ್ಟದವರು ಬಹಳ ಅಭಿಮಾನ ಇಟ್ಟು ಬರುತ್ತಿದ್ದೆವು. ಹಾಗೆ ಮಂಗಳೂರನ್ನು ಕರ್ನಾಟಕದ ಎರಡನೇ ಸಿಟಿಯಾಗಿ ಮಾಡಬೇಕೆಂಬ ಕನಸು ಇದೆ. ಇಲ್ಲಿ ಗೋಲ್ಡನ್, ಡೈಮಂಡ್ ಜುವೆಲ್ಲರಿ ತಯಾರಿಸುವ ಎಸ್ಇಝೆಡ್ ಮಾಡಬೇಕೆಂದು ಪ್ರಣಾಳಿಕೆ ಇದೆ‌. ಇನ್ನೂ ಮೂರು ವರ್ಷ ಇದೆ, ಮಾಡುತ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.
ಮೂರು ಬಾರಿ ಗೃಹ ಸಚಿವನಾಗಿದ್ದೇನೆ, ಬೇರೆ ಯಾರಿಗೂ ರಾಜ್ಯದಲ್ಲಿ ಇಂತಹ ಅವಕಾಶ ಸಿಕ್ಕಿಲ್ಲ. ಕೆಪಿಸಿಸಿ ಅಧ್ಯಕ್ಷನಾದಾಗ ಅದು ಆರು ತಿಂಗಳು ಅಷ್ಟೇ ಅಂತಿದ್ದರು.‌ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ.‌
ವೇದಿಕೆಯಲ್ಲಿ ಶಾಸಕ ಅಶೋಕ್ ರೈ, ಎಂಎಲ್ಸಿ ಐವಾನ್ ಡಿಸೋಜ, ಐಜಿಪಿ ಅಮಿತ್ ಸಿಂಗ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು