9:09 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮಂಗಳೂರನ್ನು ರಾಜ್ಯದ 2ನೇ ನಗರವಾಗಿ ಅಭಿವೃದ್ಧಿಪಡಿಸುವ ಕನಸಿದೆ: ಗೃಹ ಸಚಿವ ಡಾ. ಪರಮೇಶ್ವರ್

30/11/2024, 20:12

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೋಮುಶಕ್ತಿ ಸಮಾಜಕ್ಕೆ ಕಂಟಕ. ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿ ಬೆಳೆಯಲು ಅವಕಾಶ ಕೊಡಬೇಡಿ ಎಂದು ಈ ಹಿಂದೆ ಹೇಳಿದ್ದೆ. ಗೃಹ ಸಚಿನವಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ, ಇಲ್ಲಿ ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ್ದೆ. ಅದು ಬಹಳಷ್ಟು ಯಶಸ್ವಿಯಾಗಿದೆ ಎಂಬ ನಂಬಿಕೆಯಿದೆ. ಈಗ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.


ನಗರದ ಪಾಂಡೇಶ್ವರ ಪೊಲೀಸ್ ಲೇನ್ ನಲ್ಲಿ ನೂತನ ಪೊಲೀಸ್ ವಸತಿಗೃಹ ಉದ್ಘಾಟಿಸಿ ಅವರು ಮಾತನಾಡಿದರು.
ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ ಬಳಿಕ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ. ಈ ಭಾಗದಲ್ಲಿ ಶಾಂತಿ ನೆಲೆಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ ಮಂಗಳೂರಿಗೆ ವಿಶೇಷ ಸ್ಥಾನ ಇತ್ತು. ನಾವು ಘಟ್ಟದವರು ಬಹಳ ಅಭಿಮಾನ ಇಟ್ಟು ಬರುತ್ತಿದ್ದೆವು. ಹಾಗೆ ಮಂಗಳೂರನ್ನು ಕರ್ನಾಟಕದ ಎರಡನೇ ಸಿಟಿಯಾಗಿ ಮಾಡಬೇಕೆಂಬ ಕನಸು ಇದೆ. ಇಲ್ಲಿ ಗೋಲ್ಡನ್, ಡೈಮಂಡ್ ಜುವೆಲ್ಲರಿ ತಯಾರಿಸುವ ಎಸ್ಇಝೆಡ್ ಮಾಡಬೇಕೆಂದು ಪ್ರಣಾಳಿಕೆ ಇದೆ‌. ಇನ್ನೂ ಮೂರು ವರ್ಷ ಇದೆ, ಮಾಡುತ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.
ಮೂರು ಬಾರಿ ಗೃಹ ಸಚಿವನಾಗಿದ್ದೇನೆ, ಬೇರೆ ಯಾರಿಗೂ ರಾಜ್ಯದಲ್ಲಿ ಇಂತಹ ಅವಕಾಶ ಸಿಕ್ಕಿಲ್ಲ. ಕೆಪಿಸಿಸಿ ಅಧ್ಯಕ್ಷನಾದಾಗ ಅದು ಆರು ತಿಂಗಳು ಅಷ್ಟೇ ಅಂತಿದ್ದರು.‌ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ.‌
ವೇದಿಕೆಯಲ್ಲಿ ಶಾಸಕ ಅಶೋಕ್ ರೈ, ಎಂಎಲ್ಸಿ ಐವಾನ್ ಡಿಸೋಜ, ಐಜಿಪಿ ಅಮಿತ್ ಸಿಂಗ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು