2:08 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರನ್ನು ರಾಜ್ಯದ 2ನೇ ನಗರವಾಗಿ ಅಭಿವೃದ್ಧಿಪಡಿಸುವ ಕನಸಿದೆ: ಗೃಹ ಸಚಿವ ಡಾ. ಪರಮೇಶ್ವರ್

30/11/2024, 20:12

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೋಮುಶಕ್ತಿ ಸಮಾಜಕ್ಕೆ ಕಂಟಕ. ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿ ಬೆಳೆಯಲು ಅವಕಾಶ ಕೊಡಬೇಡಿ ಎಂದು ಈ ಹಿಂದೆ ಹೇಳಿದ್ದೆ. ಗೃಹ ಸಚಿನವಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ, ಇಲ್ಲಿ ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ್ದೆ. ಅದು ಬಹಳಷ್ಟು ಯಶಸ್ವಿಯಾಗಿದೆ ಎಂಬ ನಂಬಿಕೆಯಿದೆ. ಈಗ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.


ನಗರದ ಪಾಂಡೇಶ್ವರ ಪೊಲೀಸ್ ಲೇನ್ ನಲ್ಲಿ ನೂತನ ಪೊಲೀಸ್ ವಸತಿಗೃಹ ಉದ್ಘಾಟಿಸಿ ಅವರು ಮಾತನಾಡಿದರು.
ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ ಬಳಿಕ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ. ಈ ಭಾಗದಲ್ಲಿ ಶಾಂತಿ ನೆಲೆಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ ಮಂಗಳೂರಿಗೆ ವಿಶೇಷ ಸ್ಥಾನ ಇತ್ತು. ನಾವು ಘಟ್ಟದವರು ಬಹಳ ಅಭಿಮಾನ ಇಟ್ಟು ಬರುತ್ತಿದ್ದೆವು. ಹಾಗೆ ಮಂಗಳೂರನ್ನು ಕರ್ನಾಟಕದ ಎರಡನೇ ಸಿಟಿಯಾಗಿ ಮಾಡಬೇಕೆಂಬ ಕನಸು ಇದೆ. ಇಲ್ಲಿ ಗೋಲ್ಡನ್, ಡೈಮಂಡ್ ಜುವೆಲ್ಲರಿ ತಯಾರಿಸುವ ಎಸ್ಇಝೆಡ್ ಮಾಡಬೇಕೆಂದು ಪ್ರಣಾಳಿಕೆ ಇದೆ‌. ಇನ್ನೂ ಮೂರು ವರ್ಷ ಇದೆ, ಮಾಡುತ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.
ಮೂರು ಬಾರಿ ಗೃಹ ಸಚಿವನಾಗಿದ್ದೇನೆ, ಬೇರೆ ಯಾರಿಗೂ ರಾಜ್ಯದಲ್ಲಿ ಇಂತಹ ಅವಕಾಶ ಸಿಕ್ಕಿಲ್ಲ. ಕೆಪಿಸಿಸಿ ಅಧ್ಯಕ್ಷನಾದಾಗ ಅದು ಆರು ತಿಂಗಳು ಅಷ್ಟೇ ಅಂತಿದ್ದರು.‌ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ.‌
ವೇದಿಕೆಯಲ್ಲಿ ಶಾಸಕ ಅಶೋಕ್ ರೈ, ಎಂಎಲ್ಸಿ ಐವಾನ್ ಡಿಸೋಜ, ಐಜಿಪಿ ಅಮಿತ್ ಸಿಂಗ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು