4:34 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರ ಭಾರಿ ಕಾರ್ಯಾಚರಣೆ: ಇಬ್ಬರು ಕುಖ್ಯಾತ ಕಳ್ಳರ ಬಂಧನ; 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೈಕ್ ವಶ

26/06/2023, 16:40

ಮಂಗಳೂರು(reporterkarnataka.com): ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಎಗರಿಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಮಂಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಕೃಷ್ಣಾಪುರ ಮೂಲದ ಹಬೀಬ್ ಹಾಸನ ಮತ್ತು ಉಳ್ಳಾಲದ ಮೊಹಮ್ಮದ್ ಫೈಸಲ್ ಎಂಬವರು ಬಂಧಿತ ಆರೋಪಿಗಳು. ಇವರಿಬ್ಬರು ಈ ಹಿಂದೆ ಮಂಗಳೂರು ಕಾರಾಗೃಹ ಹಾಗೂ ಕಾರವಾರ ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು. ಇಬ್ಬರ ಬಂಧನದ ನಂತರ 12 ಪ್ರಕರಣಗಳ ಪೈಕಿ 8 ಚೈನ್ ಸ್ನ್ಯಾಚಿಂಗ್ ಮತ್ತು 4 ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಹಬೀಬ್ ಹಸನ್ ವಿರುದ್ಧ 35 ಪ್ರಕರಣಗಳು ದಾಖಲಾಗಿದ್ದು, ಮೊಹಮ್ಮದ್ ಫೈಸಲ್ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಮತ್ತು ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 15 ಪ್ರಕರಣಗಳಿವೆ. ಮೊಹಮ್ಮದ್ ಫೈಸಲ್ ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಅಪರಾಧಿಯಾಗಿದ್ದ.

ಖಾಕಿ ಬಲೆಗೆ ಬಿದ್ದದ್ದು ಹೇಗೆ?:
ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ಪುಷ್ಪಾವತಿ ಎಂಬವರು ಜೂ.2 ರಂದು ಮುಂಜಾನೆ ತಮ್ಮ ಮನೆಯ ಕಂಪೌಂಡ್‌ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರಿಗೆ ಕಳ್ಳರು ಕದ್ದ ಚಿನ್ನಾಭರಣವನ್ನು ಮಂಗಳೂರು ನಗರ ಮಾರಾಟಕ್ಕೆ ಯತ್ನಿಸಿ ವಿಫಲರಾಗಿ, ಸುರತ್ಕಲ್ ನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವುದು ಪೊಲೀಸರಿಗೆ ತಿಳಿದು ಬಂದಿತ್ತು. ಹೀಗಾಗಿ ಮಾಧವ ನಗರ ಕೊಡಿಪ್ಪಾಡಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ, ದಿಚಕ್ರವಾಹನವೊಂದನ್ನು ನಿಲ್ಲಿಸಲು ಸೂಚಿಸಿದಾಗ ಸವಾರರಿಬ್ಬರು ವಾಹನದಿಂದ ಇಳಿದು ಓಡಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹಲವು ಪ್ರಕರಣಗಳ ಬಯಲಿಗೆ ಬಂದಿತ್ತು. ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ ಆರೋಪಿಸಿಗಳು ಕದ್ದ ದ್ವಿಚಕ್ರ ವಾಹನಗಳನ್ನು ಚೈನ್ ಸ್ನ್ಯಾಚಿಂಗ್ ಗೆ ಬಳಸುತ್ತಿದ್ದರು. ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ 8000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು