5:51 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು ಪಬ್ ದಾಳಿ ಪ್ರಕರಣ:  ಪೊಲೀಸ್ ಕಮೀಷನರ್ ಏನು ಹೇಳಿದ್ರು ಗೊತ್ತೇ?

26/07/2022, 12:35

ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯಲ್ಲಿರುವ ಪಬ್ ದಾಳಿಗೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಲ್ಮಠದ ರೀ ಸೈಕಲ್ ಎಂಬ ಹೆಸರಿನ ರೆಸ್ಟೋರೆಂಟ್ ಹಾಗೂ ಪಬ್ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಸಂಘಟನೆಯೊಂದರ ಹೆಸರು ಹೇಳಿ 5-6 ಜನ ಯುವಕರು ನಿಮ್ಮ ಪಬ್‌ನಲ್ಲಿ ಅಪ್ರಾಪ್ತ-ಬಾಲಕ ಬಾಲಕಿಯರಿಗೆ ಮದ್ಯಪಾನ ಪೂರೈಕೆ ಮಾಡುತ್ತಿದ್ದೀರಿ, ಈ ಹಿಂದೆ ಈ ಬಗ್ಗೆ ಎಚ್ಚರಿಕೆ ನೀಡುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಬೌನ್ಸ‌ರ್ ಬಳಿ ಹೇಳಿದ್ದರು.

ನಂತರ ಒಳಗೆ ಹೋಗಿ ಪಬ್‌ನಲ್ಲಿರುವ ಐಡಿ ಪ್ರೊಫ್ ಕೇಳಿದ್ದಾರೆ. ಈ ವೇಳೆ ಸ್ಥಳದಲ್ಲಿ ಸ್ಥಳೀಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದೆ. ಪಬ್‌ನ ಮಾಲಿಕ ಮುಂಬೈ ಮೂಲದವರು ಸಿಸಿಟಿವಿಯ ಪರಿಶೀಲನೆ ಅವರನ್ನು ಸಂಪರ್ಕಿಸುತ್ತಿದ್ದೇವೆ. ನಿನ್ನೆ ಇಲ್ಲಿ ಭಾಗಿಯಾದ ಕೆಲವು ವಿದ್ಯಾರ್ಥಿಗಳನ್ನು ಕಾಲೇಜು ಮೂಲಕ ಸಂಪರ್ಕಿಸಿದ್ದೇವೆ. ಅವರಿಂದ ಮಾಹಿತಿ ಪಡೆಯುತ್ತಿದ್ದೇವೆ. ಘಟನೆ ಬಗ್ಗೆ ಸಿಸಿಟಿವಿ ಪರಿಶೀಲಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು