1:08 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಜ.8: ಮಂಗಳೂರು ಪುರಭವನದಲ್ಲಿ ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶ 1200 ಪ್ರತಿನಿಧಿಗಳು ಭಾಗಿ

07/01/2025, 11:30

ಮಂಗಳೂರು(reporterkarnataka.com): ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ದ.ಕ. ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶವು ನಗರದ ಪುರಭವನದಲ್ಲಿ ಜನವರಿ 8ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಅಬ್ದುಲ್ ಅಝೀಝ್ ಬೈಕಂಪಾಡಿ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತು ಮಾಹಿತಿ ನೀಡಿದರು.
ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ, ಕರಾವಳಿಯಾದ್ಯಂತ ಮತ್ತು ಇತರೆಡೆಗಳಲ್ಲಿ ವಾಸಿಸುತ್ತಿರುವ ಸುಮಾರು 25 ಲಕ್ಷ ಜನಸಂಖ್ಯೆಯ ಬ್ಯಾರಿ ಜನಾಂಗದ ಗುರುತಿಸುವಿಕೆ, ಸರಕಾರದ ಪರಿಗಣನಾಪೇಕ್ಷ ಸಾಮಾಜಿಕ ಭದ್ರತೆ, ಶೈಕ್ಷಣಿಕ, ಸಾಂಸ್ಕೃತಿಕ, ರಾಜಕೀಯ ಸಾಮಾಜಿಕ ಶ್ರೇಯೋಭಿವೃದ್ಧಿಯ
ಧ್ಯೇಯೋದ್ದೇಶದಿಂದ ಈ ಸಮಾವೇಶವನ್ನು
ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಜಿಲ್ಲೆ ಮತ್ತು ಇತರಡೆಗಳಿಂದ ಸ್ಥಳೀಯಾಡಳಿತ ಸಂಸ್ಥೆ ಮತ್ತು ಜಮಾತ್ ಸಂಸ್ಥೆಗಳಿಂದ ಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು. ಜಿಲ್ಲೆಯಾದ್ಯಂತದ ಸುಮಾರು 1200ರಷ್ಟು ಬ್ಯಾರಿ ಜನಾಂಗದ ಪ್ರತಿನಿಧಿಗಳು, ಮುಖ್ಯಸ್ಥರು ಮತ್ತು ಪ್ರಮುಖರು ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಆಲೈಡ್ ಮತ್ತು ಹೆಲ್ತ್‌‌ ಮಂಡಳಿಯ ಅಧ್ಯಕ್ಷರಾದ ಡಾ. ಯು.ಟಿ.
ಇಫ್ತಿಕಾರ್ ಅಲಿ ಫರೀದ್‌ ರವರು ಅಖಿಲ ಭಾರತ ಬ್ಯಾರಿ ಮಹಾಸಭಾ ಸಂಘಟನೆಯ
ಗೌರವ ಅಧ್ಯಕ್ಷರಾಗಿದ್ದು ಅವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಲಿದೆ. ಸಮಾವೇಶದಲ್ಲಿ ಬ್ಯಾರಿ ಜನಾಂಗದ ಸ್ಥಳೀಯ ಆಕಾಂಕ್ಷಿ ಪದವೀಧರ ವಿದ್ಯಾರ್ಥಿಗಳಿಗೆ ಯು.ಪಿ.ಎಸ್.ಸಿ. ಉನ್ನತ ಶಿಕ್ಷಣ ತರಬೇತಿ ‘ಜಮಾತಿಗೊಂದು ಐಎಎಸ್, ಐಪಿಎಸ್’ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಸಮಾವೇಶದ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಅಬ್ದುಲ್ ಅಝೀಝ್
ಬೈಕಂಪಾಡಿ ವಹಿಸಲಿದ್ದಾರೆ. ಸಮಾವೇಶದಲ್ಲಿ ಬ್ಯಾರಿ ಜನಾಂಗದ
ಉನ್ನತರು, ಪ್ರಮುಖರಾದ ವ್ಯಕ್ತಿಗಳು
ಭಾಗವಹಿಸಲಿದ್ದು, ಜನಾಂಗದ ಶ್ರೇಯೋಭಿವೃದ್ಧಿಯ ಬಗ್ಗೆ ಚರ್ಚೆ ನಡೆಯಲಿದೆ. ಸಮಾವೇಶದಲ್ಲಿ ಬ್ಯಾರಿ ಜನಾಂಗದ ಶ್ರೇಯೋಭಿವೃದ್ಧಿಯ ಉದ್ದೇಶಿತ ಕರ್ನಾಟಕ ರಾಜ್ಯ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯದ ಬಗ್ಗೆ ಪ್ರಸ್ತಾವನೆ ನಡೆಯಲಿದೆ. ಸಮಾವೇಶದಲ್ಲಿ ಬ್ಯಾರಿ ಜನಾಂಗವು ಮೂಲನಿವಾಸಿ ಜನಾಂಗವಾಗಿದ್ದು, ಬ್ಯಾರಿ
ಜನಾಂಗಕ್ಕೆ ಸಂವಿದಾನದ 6ನೇ ಶೆಡ್ಯೂಲ್ ನಲ್ಲಿ ಮಾನ್ಯತೆ ಪಡೆಯುವಿಕೆಯ ಬಗ್ಗೆ
ಪ್ರಸ್ತಾವನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಬ್ಯಾರಿ ಜನಾಂಗದ ಸ್ಥಳೀಯಾಡಳಿತ ಸಂಸ್ಥೆಯ
ಪ್ರತಿನಿಧಿಗಳನ್ನು ಮತ್ತು ಜಮಾತ್‌ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ಶಾಕಿರ್ ಹಾಜಿ, ಮೊಹಮ್ಮದ್ ಹನೀಫ್, ಹಮೀದ್ ಕಿನ್ಯಾ, ಮುಹಮ್ಮದ್ ಮೋನು, ಇ.ಕೆ.ಹುಸೈನ್, ಅಬ್ದುಲ್ ರಹಿಮಾನ್ ಕೋಡಿಜಾಲ್, ಅಬ್ದುಲ್ ಖಾದರ್, ಇಬ್ರಾಹಿಂ ಬಾವ ಬಜಾಲ್, ಇಕ್ಬಾಲ್ ಮೂಲ್ಕಿ, ಝಕರಿಯ ಮಲಾರ್, ಮುಹಮ್ಮದ್ ಹನೀಫ್ ದೇರಳಕಟ್ಟೆ, ಮೊಹಮ್ಮದ್ ಸಮೀರ್ ಆರ್.ಕೆ., ಅಶ್ರಫ್ ಬದ್ರಿಯಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು