7:06 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Mangaluru | ಮಳೆ ಅನಾಹುತ: ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ

19/07/2025, 13:25

ಮಂಗಳೂರು(reporter,karnataka.com): ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸತತ ಮಳೆಯಿಂದಾಗಿ ಅಡುಮರೋಳಿ ಶೋಭಾ ಶೆಟ್ಟಿ ಎಂಬುವವರ ಮನೆಯ ಎತ್ತರದ ಕಾಂಪೌಂಡ್ ಕುಸಿದು ಅಪಾರ ನಷ್ಟವುಂಟಾಗಿದೆ. ಅಲ್ಲದೇ ಪಾಂಪು ಮನೆ, ಸುಶಾಂತ್ ಪೂಜಾರಿ, ಮಹಾಬಲ ಎಂಬುವವರ ಮನೆಯ ಹಿಂಬದಿಯ ಗುಡ್ಡ ಕುಸಿದಿದ್ದು ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಇದರಿಂದಾಗಿ ಮನೆಗಳಿಗೂ ಹಾನಿಯಾಗುವ ಸಂಭವವಿದ್ದು ಕೂಡಲೇ ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಪ್ರಶಾಂತ್ ಮರೋಳಿ, ಜಗದೀಶ್ ಶೆಣೈ, ಜಗನ್ನಾಥ ದೊಡ್ಡಮನೆ, ಸೇರಿದಂತೆ ಪಾಲಿಕೆಯ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು