9:48 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿಯ ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ  

13/06/2022, 19:02

ಚಿತ್ರ: ಮಂಜು ನೀರೇಶ್ವಾಲ್ಯ                              ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಸಮಾಜದ 18 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.

ಭಾನುವಾರ ದೇವತಾ ಪೂಜನೆ , ಉದ್ದಿನ ಮುಹೂರ್ಥ ಕಾರ್ಯಕ್ರಮಗಳು ಜರಗಿದವು . ಸೋಮವಾರ ಕೋಟೇಶ್ವರ ಮೊಕ್ಕಾಂ ನಿಂದ ಶ್ರೀಗಳವರು ಆಗಮಿಸಿ ಶ್ರೀ ದೇವರ ದರ್ಶನ ಬಳಿಕ ಶ್ರೀ ದೇವರ ಸನ್ನಿಧಿಯಲ್ಲಿ ವಟುಗಳು ಶ್ರೀಗಳವರ ಅಮೃತ ಹಸ್ತಗಳಿಂದ  ಯಜ್ನೋಪವಿತ ಧಾರಣೆ

ಬಳಿಕ ರಾಜಾಂಗಣದಲ್ಲಿ  ವಟುಗಳಿಗೆ ಶ್ರೀಗಳವರು ಭಿಕ್ಷೆ ಹಾಗೂ ತಪ್ತ ಮುದ್ರಾಧಾರಣೆ ನೀಡಿದರು . ಬಳಿಕ ಆಶೀರ್ವಚನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಎಂ . ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಚೇರ್ಮನ್ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಎಂ . ಪದ್ಮನಾಭ ಪೈ , ತಂತ್ರಿ ಗಳಾದ ಪಂಡಿತ್ ನರಸಿಂಹ ಆಚಾರ್ಯ ಹಾಗೂ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು