7:38 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ

11/10/2021, 20:55

ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ಭಾನುವಾರ ರಾತ್ರಿ ಗಂಟೆ 8.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ವೆಂಕಟರಮಣ ದೇವಳದ ರಾಜಾಂಗಣದಿಂದ ಉತ್ಸವ ಸ್ಥಾನಕ್ಕೆ ತರಲಾಯಿತು. ಸೋಮವಾರ ಮಧ್ಯಾಹ್ನ ಗಂಟೆ 1.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿತು. ಶುಕ್ರವಾರದವರೆಗೆ ದೀಪಾಲಂಕಾರ ಹಾಗೂ ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ 10.00 ಗಂಟೆಯಿಂದ 12.00 ಗಂಟೆಯವರೆಗೆ ವಿದ್ಯಾರಂಭ ಸೇವೆ ಸಂಪನ್ನಗೊಳ್ಳಲಿದೆ.

ಅ. 16 ಶನಿವಾರ ಸಂಜೆ ಗಂಟೆ 5.00ಕ್ಕೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನವನ್ನು ಪಡೆಯಬಹುದು. ನಂತರ ಶ್ರೀ ಮಹಾಮಾಯಾ ತೀರ್ಥದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನೆ ನಡೆಯಲಿದೆ

ಪ್ಲವ ನಾಮ ಸಂವತ್ಸರದ ಆಸ್ವೀಜ ಶುದ್ಧ ಪಂಚಮಿ ದಿನ ಆರಂಭಗೊಂಡ ಉತ್ಸವ ಏಕಾದಶಿ ಶನಿವಾರ(ಅ.16)ರ ವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು