6:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ

11/10/2021, 20:55

ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ಭಾನುವಾರ ರಾತ್ರಿ ಗಂಟೆ 8.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ವೆಂಕಟರಮಣ ದೇವಳದ ರಾಜಾಂಗಣದಿಂದ ಉತ್ಸವ ಸ್ಥಾನಕ್ಕೆ ತರಲಾಯಿತು. ಸೋಮವಾರ ಮಧ್ಯಾಹ್ನ ಗಂಟೆ 1.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿತು. ಶುಕ್ರವಾರದವರೆಗೆ ದೀಪಾಲಂಕಾರ ಹಾಗೂ ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ 10.00 ಗಂಟೆಯಿಂದ 12.00 ಗಂಟೆಯವರೆಗೆ ವಿದ್ಯಾರಂಭ ಸೇವೆ ಸಂಪನ್ನಗೊಳ್ಳಲಿದೆ.

ಅ. 16 ಶನಿವಾರ ಸಂಜೆ ಗಂಟೆ 5.00ಕ್ಕೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನವನ್ನು ಪಡೆಯಬಹುದು. ನಂತರ ಶ್ರೀ ಮಹಾಮಾಯಾ ತೀರ್ಥದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನೆ ನಡೆಯಲಿದೆ

ಪ್ಲವ ನಾಮ ಸಂವತ್ಸರದ ಆಸ್ವೀಜ ಶುದ್ಧ ಪಂಚಮಿ ದಿನ ಆರಂಭಗೊಂಡ ಉತ್ಸವ ಏಕಾದಶಿ ಶನಿವಾರ(ಅ.16)ರ ವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು