9:50 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿಯ ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ  

13/06/2022, 19:02

ಚಿತ್ರ: ಮಂಜು ನೀರೇಶ್ವಾಲ್ಯ                              ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಸಮಾಜದ 18 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.

ಭಾನುವಾರ ದೇವತಾ ಪೂಜನೆ , ಉದ್ದಿನ ಮುಹೂರ್ಥ ಕಾರ್ಯಕ್ರಮಗಳು ಜರಗಿದವು . ಸೋಮವಾರ ಕೋಟೇಶ್ವರ ಮೊಕ್ಕಾಂ ನಿಂದ ಶ್ರೀಗಳವರು ಆಗಮಿಸಿ ಶ್ರೀ ದೇವರ ದರ್ಶನ ಬಳಿಕ ಶ್ರೀ ದೇವರ ಸನ್ನಿಧಿಯಲ್ಲಿ ವಟುಗಳು ಶ್ರೀಗಳವರ ಅಮೃತ ಹಸ್ತಗಳಿಂದ  ಯಜ್ನೋಪವಿತ ಧಾರಣೆ

ಬಳಿಕ ರಾಜಾಂಗಣದಲ್ಲಿ  ವಟುಗಳಿಗೆ ಶ್ರೀಗಳವರು ಭಿಕ್ಷೆ ಹಾಗೂ ತಪ್ತ ಮುದ್ರಾಧಾರಣೆ ನೀಡಿದರು . ಬಳಿಕ ಆಶೀರ್ವಚನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಎಂ . ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಚೇರ್ಮನ್ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಎಂ . ಪದ್ಮನಾಭ ಪೈ , ತಂತ್ರಿ ಗಳಾದ ಪಂಡಿತ್ ನರಸಿಂಹ ಆಚಾರ್ಯ ಹಾಗೂ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು