1:48 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿಯ ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ  

13/06/2022, 19:02

ಚಿತ್ರ: ಮಂಜು ನೀರೇಶ್ವಾಲ್ಯ                              ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಸಮಾಜದ 18 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.

ಭಾನುವಾರ ದೇವತಾ ಪೂಜನೆ , ಉದ್ದಿನ ಮುಹೂರ್ಥ ಕಾರ್ಯಕ್ರಮಗಳು ಜರಗಿದವು . ಸೋಮವಾರ ಕೋಟೇಶ್ವರ ಮೊಕ್ಕಾಂ ನಿಂದ ಶ್ರೀಗಳವರು ಆಗಮಿಸಿ ಶ್ರೀ ದೇವರ ದರ್ಶನ ಬಳಿಕ ಶ್ರೀ ದೇವರ ಸನ್ನಿಧಿಯಲ್ಲಿ ವಟುಗಳು ಶ್ರೀಗಳವರ ಅಮೃತ ಹಸ್ತಗಳಿಂದ  ಯಜ್ನೋಪವಿತ ಧಾರಣೆ

ಬಳಿಕ ರಾಜಾಂಗಣದಲ್ಲಿ  ವಟುಗಳಿಗೆ ಶ್ರೀಗಳವರು ಭಿಕ್ಷೆ ಹಾಗೂ ತಪ್ತ ಮುದ್ರಾಧಾರಣೆ ನೀಡಿದರು . ಬಳಿಕ ಆಶೀರ್ವಚನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಎಂ . ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಚೇರ್ಮನ್ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಎಂ . ಪದ್ಮನಾಭ ಪೈ , ತಂತ್ರಿ ಗಳಾದ ಪಂಡಿತ್ ನರಸಿಂಹ ಆಚಾರ್ಯ ಹಾಗೂ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು