10:01 AM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ

15/04/2022, 23:13

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ದೇವಾಲಯಗಳಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯನ್ನು ನ್ಯಾಯಾಲಯದ ಆದೇಶಾನುಸಾರ ಪುನರ್ ರಚಿಸುವ ಸಲುವಾಗಿ ಚುನಾವಣೆ ಗುರವಾರ ನಡೆಯಿತು. 

ಸ್ಪರ್ಧಿಸಿದ ಒಟ್ಟು 11 ಅಭ್ಯರ್ಥಿಗಳಲ್ಲಿ ಅಡಿಗೆ ಬಾಲಕೃಷ್ಣ ಶೆಣೈ,  ಎಂ.ಕಿರಣ್ ಪೈ, ಎಂ.ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಹಾಗೂ ಎಂ. ಜಗನ್ನಾಥ್ ಕಾಮತ್ ಮುಂದಿನ 5 ವರ್ಷಗಳ ಅವಧಿಗೆ ಶ್ರೀ ದೇವಳದ ಮುಕ್ತೇಸರರಾಗಿ ಆಯ್ಕೆಗೊಂಡರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುವ ಹದಿನೆಂಟು ವರ್ಷ ಮೇಲ್ಪಟ್ಟ ಸಮಾಜ ಬಾಂಧವರಿಗೆ ಮತದಾನದಲ್ಲಿ ಭಾಗವಹಿಸುವ  ಅವಕಾಶ ಕಲ್ಪಿಸಲಾಗಿತ್ತು. 

ಬೆಳಗ್ಗೆ 8.00ಕ್ಕೆ ಮತದಾನ ಪ್ರಾರಂಭವಾಗಿ ಸಂಜೆ 7.೦೦ಕ್ಕೆ ಮುಕ್ತಾಯಗೊಂಡಿತು. ಶ್ರೀ ದೇವಳದ ನಿಯೋಜಿತ ಚುನಾವಣಾ ಅಧಿಕಾರಿಯಾಗಿದ್ದ ನ್ಯಾಯವಾದಿ ನಾಗೇಶ್ ಕುಮಾರ್ ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿದ್ದ ಪ್ರೇಮಾನಂದ ಕಿಣಿ ಹಾಗೂ ಸ್ವಯಂಸೇವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.  ಶುಕ್ರವಾರ ಬೆಳಿಗ್ಗೆ ಮಾಜಿ ಮೊಕ್ತೇಸರರಾದ ಸಿ . ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ರವರು ತಮ್ಮ ಅಧಿಕಾರ ಹಾಗೂ ದೇವಳದ ಕೀಲಿಗಳನ್ನು ಶ್ರೀ ದೇವರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೊಕ್ತೇಸರರಾದ ಎಂ . ಪದ್ಮನಾಭ ಪೈ  , ಕೊಚ್ಚಿಕಾರ್ ಜಯರಾಜ್ ಪೈ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು