5:43 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ

15/04/2022, 23:13

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ದೇವಾಲಯಗಳಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯನ್ನು ನ್ಯಾಯಾಲಯದ ಆದೇಶಾನುಸಾರ ಪುನರ್ ರಚಿಸುವ ಸಲುವಾಗಿ ಚುನಾವಣೆ ಗುರವಾರ ನಡೆಯಿತು. 

ಸ್ಪರ್ಧಿಸಿದ ಒಟ್ಟು 11 ಅಭ್ಯರ್ಥಿಗಳಲ್ಲಿ ಅಡಿಗೆ ಬಾಲಕೃಷ್ಣ ಶೆಣೈ,  ಎಂ.ಕಿರಣ್ ಪೈ, ಎಂ.ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಹಾಗೂ ಎಂ. ಜಗನ್ನಾಥ್ ಕಾಮತ್ ಮುಂದಿನ 5 ವರ್ಷಗಳ ಅವಧಿಗೆ ಶ್ರೀ ದೇವಳದ ಮುಕ್ತೇಸರರಾಗಿ ಆಯ್ಕೆಗೊಂಡರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುವ ಹದಿನೆಂಟು ವರ್ಷ ಮೇಲ್ಪಟ್ಟ ಸಮಾಜ ಬಾಂಧವರಿಗೆ ಮತದಾನದಲ್ಲಿ ಭಾಗವಹಿಸುವ  ಅವಕಾಶ ಕಲ್ಪಿಸಲಾಗಿತ್ತು. 

ಬೆಳಗ್ಗೆ 8.00ಕ್ಕೆ ಮತದಾನ ಪ್ರಾರಂಭವಾಗಿ ಸಂಜೆ 7.೦೦ಕ್ಕೆ ಮುಕ್ತಾಯಗೊಂಡಿತು. ಶ್ರೀ ದೇವಳದ ನಿಯೋಜಿತ ಚುನಾವಣಾ ಅಧಿಕಾರಿಯಾಗಿದ್ದ ನ್ಯಾಯವಾದಿ ನಾಗೇಶ್ ಕುಮಾರ್ ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿದ್ದ ಪ್ರೇಮಾನಂದ ಕಿಣಿ ಹಾಗೂ ಸ್ವಯಂಸೇವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.  ಶುಕ್ರವಾರ ಬೆಳಿಗ್ಗೆ ಮಾಜಿ ಮೊಕ್ತೇಸರರಾದ ಸಿ . ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ರವರು ತಮ್ಮ ಅಧಿಕಾರ ಹಾಗೂ ದೇವಳದ ಕೀಲಿಗಳನ್ನು ಶ್ರೀ ದೇವರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೊಕ್ತೇಸರರಾದ ಎಂ . ಪದ್ಮನಾಭ ಪೈ  , ಕೊಚ್ಚಿಕಾರ್ ಜಯರಾಜ್ ಪೈ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು